RNI NO. KARKAN/2006/27779|Tuesday, August 5, 2025
You are here: Home » breaking news » ಗೋಕಾಕ:ಸಂಭಾವ್ಯ ಪ್ರವಾಹ ಪರಿಸ್ಥಿತಿ ಎದುರಿಸುವ ಸೂಕ್ತ ಕ್ರಮ ಕೈಗೋಳ್ಳಿ: ನೋಡಲ್ ಅಧಿಕಾರಿ ಬಸವರಾಜ ಕುರಿಹುಲಿ

ಗೋಕಾಕ:ಸಂಭಾವ್ಯ ಪ್ರವಾಹ ಪರಿಸ್ಥಿತಿ ಎದುರಿಸುವ ಸೂಕ್ತ ಕ್ರಮ ಕೈಗೋಳ್ಳಿ: ನೋಡಲ್ ಅಧಿಕಾರಿ ಬಸವರಾಜ ಕುರಿಹುಲಿ 

ಸಂಭಾವ್ಯ ಪ್ರವಾಹ ಪರಿಸ್ಥಿತಿ ಎದುರಿಸುವ ಸೂಕ್ತ ಕ್ರಮ ಕೈಗೋಳ್ಳಿ: ನೋಡಲ್ ಅಧಿಕಾರಿ ಬಸವರಾಜ ಕುರಿಹುಲಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 21

 
ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರದಂದು ನಗರದ ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆದ ತಾಲೂಕಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದಲ್ಲದೆ ಕಾಳಜಿ ಕೇಂದ್ರಗಳಿಗಾಗಿ ಸರಕಾರಿ ಕಟ್ಟಡಗಳನ್ನು ಗುರುತಿಸಿ ಜನರ ಸ್ಥಳಾಂತರಕ್ಕಾಗಿ ಕ್ರಮವಹಿಸುವುದು ಮತ್ತು ರೋಗ ರುಜಿನಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಇತ್ಯಾದಿಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ ತಾಲೂಕು ಕಛೇರಿಯಲ್ಲಿ 24×7 ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಸಹಾಯವಾಣಿ ಸಂಖ್ಯೆ 08332-225073 ಗೆ ಸಂರ್ಪಕಿಸಬೇಕು. ಪ್ರವಾಹ ಪೀಡಿತವಾಗುವ ಸಂಭಾವ್ಯ ಗ್ರಾಮಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ನೂಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಪ್ರಕೃತಿ ವಿಕೋಪಗಳು ಸಂಭವಿಸಿದಲ್ಲಿ ತಕ್ಷಣ ಸ್ಪಂದಿಸಲು ತಾಲೂಕು ಆಡಳಿತದಿಂದ ಸಂಪೂರ್ಣ ಸಿಧ್ದತೆಯನ್ನು ಮಾಡಿಕೊಳ್ಳಲು ಸೂಕ್ತ ಕ್ರಮ ಜರುಗಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಶಿವಾನಂದ ಹಿರೇಮಠ, ವಲಯ ಅರಣ್ಯ ಅಧಿಕಾರಿ ಕೆ.ಎನ್ ವಣ್ಣೂರ, ಕೃಷಿ ಇಲಾಖೆಯ ಎಮ್ ಎಮ್ ನದಾಫ , ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಎಸ್ ಪಿ ವರಾಳೆ, ಪಶು ವೈದ್ಯಕೀಯ ಇಲಾಖೆಯ ಮೋಹನ ಕಮತ, ಘಟಪ್ರಭಾ ಮುಖ್ಯಾಧಿಕಾರಿ ಕೆಂಪಣ್ಣ ಪಾಟೀಲ, ಆರಕ್ಷಕ ಉಪನಿರೀಕ್ಷಕರು ಗೋಕಾಕ ಶಹರ ಹಾಗೂ GRBC ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ವಿ ಸಿ ಪತ್ತಾರ ಹಾಗೂ ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.

Related posts: