RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ಬರುವ ವರ್ಷದಿಂದ ಸತೀಶ್ ಶುಗರ್ ಆರ್ವಾಡ್ಸ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ : ಶಾಸಕ ಸತೀಶ ಜಾರಕಿಹೊಳಿ

ಗೋಕಾಕ:ಬರುವ ವರ್ಷದಿಂದ ಸತೀಶ್ ಶುಗರ್ ಆರ್ವಾಡ್ಸ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ : ಶಾಸಕ ಸತೀಶ ಜಾರಕಿಹೊಳಿ 

ಬರುವ ವರ್ಷದಿಂದ ಸತೀಶ್ ಶುಗರ್ ಆರ್ವಾಡ್ಸ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ : ಶಾಸಕ ಸತೀಶ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 7 :
ಬರುವ ವರ್ಷದಿಂದ ಸತೀಶ್ ಶುಗರ್ ಆರ್ವಾಡ್ಸ ಕಾರ್ಯಕ್ರಮ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ರವಿವಾರದಂದು ನಗರದಲ್ಲಿ ಜರುಗುತ್ತಿರುವ ಕುಂಟು ಕೋಣ ಮುಖಜಾಣ ನಾಟಕ ವೀಕ್ಷಿಸಿ ಅವರು ಮಾತನಾಡಿದರು

ಕೊವಿಡ್ ಕಾರಣದಿಂದ ಕಳೆದ ಮೂರು ವರ್ಷದಿಂದ ಸತೀಶ್ ಶುಗರ್ ಆರ್ವಾಡ್ಸ ಕಾರ್ಯಕ್ರಮ ಸಂಘಟಿಸಲು ಸಾಧ್ಯವಾಗಿಲ್ಲ ಬರುವ ವರ್ಷದಿಂದ ಈ ಕಾರ್ಯಕ್ರಮವನ್ನು ಮುಂದುವರೆಸುಕೊಂಡು ಹೋಗಲಾಗುವದು ಎಲ್ಲರೂ ಈ ಕಾರ್ಯಕ್ರಮದ ಸದುಪಯೋಗ ಪಡೆಸಿಕೊಳ್ಳಬೇಕು ಎಂದ ಅವರು ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಾಟಕ , ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತರಬೇತಿಗಳನ್ನು ನೀಡಲಾಗುತ್ತಿದೆ.

ನಾಟಕ ಕಲೆಯನ್ನು ಉಳಿಸಿ ಬೆಳೆಸಲು ಕಮತಗಿಯ ವಿಶ್ವ ಜ್ಯೋತಿ ಶ್ರೀ ಪಂಚಾಕ್ಷರಿ ನಾಟ್ಯ ಸಂಘವು ನಾಡಿನಾದ್ಯಂತ ನಾಟಕಗಳನ್ನು ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿರುವದು ಶ್ಲಾಘನೀಯ, ನಾಟಕ ಕಲಾವಿದರು ತಮ್ಮ ಬದುಕಿನಲ್ಲಿ ಸಾಕಷ್ಟು ತೊಂದರೆ ಇದ್ದರು ಸಹ ಅವುಗಳನ್ನು ಮುಚ್ಚಿಕೊಂಡು ಜನರನ್ನು ನೆಡೆಸುವ ಕಾರ್ಯ ಮಾಡಿ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ನಿರತವಾಗಿರುವದು ಮೆಚ್ಚುವ ಕಾರ್ಯವಾಗಿದೆ ‌ ಇಂತಹ ಕಲೆ ಮತ್ತು ಸಂಘ , ಸಂಸ್ಥೆಗಳನ್ನು ಉಳಿಸಿ ,ಬೆಳೆಸುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮಾಡಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನಾಟ್ಯ ಸಂಘದ ವತಿಯಿಂದ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: