RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ: ಸಂಸದ ಈರಣ್ಣ ಕಡಾಡಿ

ಗೋಕಾಕ:ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ: ಸಂಸದ ಈರಣ್ಣ ಕಡಾಡಿ 

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ: ಸಂಸದ ಈರಣ್ಣ ಕಡಾಡಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17 :

 

ಪ್ರಧಾನಿ ನರೇಂದ್ರ ಮೋದಿ ಅವರ ಬಲಿಷ್ಢ ನಾಯಕತ್ವದಲ್ಲಿ ಭಾರತ ದೇಶ ಸಾಕಷ್ಟು ಪ್ರಗತಿಯ ಜೋತೆಗೆ ಅಭಿವೃದ್ಧಿಶೀಲ ರಾಷ್ಟ್ರವಾಗಿ ಸಾಗುತ್ತಿದೆ. ಪ್ರಧಾನಿ ಮೋದಿ ವಿಶ್ವಮಾನ್ಯ ನಾಯಕರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ , ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ಅರಬಾಂವಿ ಮಂಡಲ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ, ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸ್ಥಳೀಯ ಸದ್ಗುರು ಯಲ್ಲಾಲಿಂಗ ಮಠದ ಆವರಣದಲ್ಲಿ ಶನಿವಾರದಂದು ನಡೆದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳ ಉದ್ಘಾಟನೆ ನೆರೆವೇರಿ‌ಸಿ ಅವರು ಮಾತನಾಡಿದರು‌.
ದೇಶಿ ಕ್ರೀಡೆಗಳನ್ನು ಉಳಿಸಿ ಬೆಳೆಸೋಣ, ದೇಶಿ ಕ್ರೀಡೆಗಳನ್ನು ಆಡುವುದರಿಂದ ಶಾರೀರಕ ಸದೃಢತೆ ಹೆಚ್ಚುತ್ತದೆ. ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷ ಅಲ್ಲಾ ಎಂದರು. ಪ್ರಧಾನಿ ಮೋದಿ ಅವರ ದೂರದೃಷ್ಠಿ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ. ಶ್ರೀರಾಮ ಮಂದಿರ ನಿರ್ಮಾಣ, ಜಮ್ಮು ಕಾಶ್ಮೀರದೊಳಗೆ ಭಯೋತ್ಪಾದನೆ ತಡೆಗಟ್ಟುವುದರ ಜೋತೆಗೆ 370 ವಿಧಿ ರದ್ದು, ಸ್ವಚ್ಛ ಭಾರತ, ಮೇಕ್ ಇನ್ ಇಂಡಿಯಾ ಅಭಿಯಾನ, ಬಡವರಿಗೆ ಉಚಿತ ಗ್ಯಾಸ್, ರೈತರಿಗೆ ಕಿಸಾನ ಸಮ್ಮಾನ ಯೋಜನೆ ಸೇರಿದಂತೆ ಹಲವಾರು ಮಹತ್ವಕಾಂಕ್ಷಿ ಯೋಜನೆ ಮತ್ತು ಅಭಿಯಾನಗಳನ್ನು ಜಾರಿಗೆ ತರುವ ಮೂಲಕ ಸಾಕಷ್ಟು ಕೊಡುಗೆಗಳನ್ನು ಮೋದಿಯವರು ದೇಶದ ಜನರಿಗೆ ನೀಡಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗಣ್ಯರು ಮತ್ತು ಸಾಧಕರನ್ನು ಸತ್ಕರಿಸಿ,ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡ, ಬೆಳಗಾವಿ ಗ್ರಾಮೀಣ ರೈತ ಮೋರ್ಚಾ ಅಧ್ಯಕ್ಷ ಶ್ರೀಕರ ಕುಲಕರ್ಣಿ , ಅರಬಾಂವಿ ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಶಿವಾನಂದ ಲೋಕಣ್ಣವರ, ಪ್ರದೀಪ ಸಾಣಿಕೊಪ್ಪ ಹನುಮಂತ ಸಂಗಟಿ, ಚಂದ್ರಶೇಖರ ನೀಲಣ್ಣವರ, ಈರಣ್ಣ ದೇಯಣ್ಣವರ, ಈಶ್ವರ ಮುಧೋಳ, ಈರಣ್ಣ ಬಳಿಗಾರ, ಅಶೋಕ ಕೋಣಿ, ಬಸವರಾಜ ದೇಯಣ್ಣವರ, ಬಸವರಾಜ ಪಣದಿ, ರಾಮಣ್ಣ ಮುಧೋಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: