RNI NO. KARKAN/2006/27779|Sunday, June 15, 2025
You are here: Home » breaking news » ಮೂಡಲಗಿ :ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮೂಡಲಗಿ ತಾಲೂಕು ಅನುಮೋದನೆ , ಮುಖ್ಯಮಂತ್ರಿ ಭರವಸೆ : ಶಾಸಕ ಬಾಲಚಂದ್ರ

ಮೂಡಲಗಿ :ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮೂಡಲಗಿ ತಾಲೂಕು ಅನುಮೋದನೆ , ಮುಖ್ಯಮಂತ್ರಿ ಭರವಸೆ : ಶಾಸಕ ಬಾಲಚಂದ್ರ 

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮೂಡಲಗಿ ತಾಲೂಕು ಅನುಮೋದನೆ , ಮುಖ್ಯಮಂತ್ರಿ ಭರವಸೆ : ಶಾಸಕ ಬಾಲಚಂದ್ರ

ಮೂಡಲಗಿ ಅ 5: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮೂಡಲಗಿ ತಾಲೂಕು ರಚನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭರವಸೆ ನೀಡಿದ್ದಾರೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಗುರುವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾನು ಹಾಗೂ ಸಹಕಾರ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಕೂಡಿಕೊಂಡು ಮುಖ್ಯಮಂತ್ರಿಗಳ ಗೃಹ ಕಛೇರಿ ಕಾವೇರಿಗೆ ಬುಧವಾರ ರಾತ್ರಿ ತೆರಳಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮೂಡಲಗಿ ತಾಲೂಕು ರಚನೆಗೆ ಮನವಿ ಮಾಡಿಕೊಂಡಿದ್ದಾಗಿ ಅವರು ಹೇಳಿದ್ದಾರೆ.

ಗೋಕಾಕ ತಾಲೂಕಿನ ದೊಡ್ಡ ಪಟ್ಟಣವಾಗಿರುವ ಮೂಡಲಗಿಯನ್ನು ತಾಲೂಕು ಕೇಂದ್ರವನ್ನಾಗಿ ಕೂಡಲೇ ಘೋಷಿಸಬೇಕು. ಸುಮಾರು 40 ವರ್ಷಗಳಿಂದ ತಾಲೂಕಾ ಸ್ಥಾನಮಾನಕ್ಕೆ ಹೋರಾಟ ಮಾಡಿಕೊಂಡು ಬರುತ್ತಿರುವ ಮೂಡಲಗಿ ಜನತೆಗೆ ನ್ಯಾಯ ದೊರಕಿಸಿಕೊಡುವಂತೆ ಮುಖ್ಯಮಂತ್ರಿಗಳಲ್ಲಿ ಕೋರಿರುವುದಾಗಿ ಅವರು ಹೇಳಿದ್ದಾರೆ.

ಈಗಾಗಲೇ ತಾಲೂಕು ಕೇಂದ್ರಕ್ಕೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ಮುಂದುವರೆದಿದೆ. ಆದ್ದರಿಂದ ಎಲ್ಲ ರೀತಿಯಿಂದಲೂ ಯೋಗ್ಯವಿರುವ ಮೂಡಲಗಿಗೆ ತಾಲೂಕು ಸ್ಥಾನಮಾನ ನೀಡಬೇಕು. ಇದು ಮೂಡಲಗಿ ಹಾಗೂ ಸುತ್ತಮುತ್ತಲಿನ ನಾಗರೀಕರ ಪ್ರಮುಖ ಬೇಡಿಕೆಯಾಗಿದೆ. ಅಲ್ಲದೇ ಮೂಡಲಗಿ ಹೊಸ ತಾಲೂಕು ಅಂತಾ ಈಗಾಗಲೇ ಸರ್ಕಾರ ಬಜೆಟ್ ಅಧಿವೇಶನದಲ್ಲಿ ಘೋಷಿಸಿದೆ. ಸೆ. 6 ರಂದು ಪ್ರಕಟಿಸಿದ ಹೊಸ ತಾಲೂಕುಗಳ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವುದರಿಂದ ಇಲ್ಲಿನ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಮುಂಬರುವ ಸಂಪುಟ ಸಭೆಯಲ್ಲಿ ಮೂಡಲಗಿ ಹೊಸ ತಾಲೂಕು ಪ್ರಸ್ತಾವನೆಗೆ ಅನುಮೋದನೆ ನೀಡಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ನಾವು ಕೋರಿಕೊಂಡಿದ್ದೇವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ನಮ್ಮ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮುಂಬರುವ ಸಂಪುಟ ಸಭೆಯಲ್ಲಿ ಮೂಡಲಗಿ ಪ್ರಸ್ತಾವನೆ ವಿಷಯವನ್ನು ಸಂಪುಟಕ್ಕೆ ತರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದಾರೆ. ಸುಮಾರು 30 ನಿಮಿಷಗಳ ಕಾಲ ನಮ್ಮೊಂದಿಗೆ ಮಾತುಕತೆ ನಡೆಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಖ್ಯಮಂತ್ರಿಗಳ ವಿಶ್ವಾಸದಿಂದ ಮೂಡಲಗಿ ಪಟ್ಟಣ ಇನ್ನೊಂದು ವಾರದೊಳಗೆ ನಿಸ್ಸಂದೇಹವಾಗಿ ತಾಲೂಕು ಸ್ಥಾನಮಾನ ಹೊಂದುತ್ತದೆ. ಹೊಸದಾಗಿ ಮೂಡಲಗಿ ತಾಲೂಕು ಆಸ್ತಿತ್ವಕ್ಕೆ ಬಂದೇ ಬರುತ್ತದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related posts: