RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಂಜೂರಾತಿ ಪತ್ರಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ

ಗೋಕಾಕ:ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಂಜೂರಾತಿ ಪತ್ರಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ 

ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಂಜೂರಾತಿ ಪತ್ರಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16:
ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ರವಿವಾರದಂದು ವಿತರಿಸಿದರು.
ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಅರ್ಹ ಫಲಾನುಭವಿಗಳಿಗೆ 3.30ಲಕ್ಷ ರೂ ಮತ್ತು ಇತರೆ ಫಲಾನಿಭವಿಗಳಿಗೆ 2.70ಲಕ್ಷ ರೂಗಳಂತೆ ಒಟ್ಟು 75 ಫಲಾನಿಭವಿಗಳಿಗೆ ನಿರ್ಮಾಣ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕರ ಸಹಾಯಕ ಭೀಮಗೌಡ ಪೋಲಿಸಗೌಡರ, ಕಾಂತು ಎತ್ತಿನಮನಿ, ಸುರೇಶ ಸನದಿ, ಪುರಸಭೆ ಸದಸ್ಯರುಗಳಾದ ಪ್ರಕಾಶ ಕರನಿಂಗ, ಅಶೋಕ ಕುಮಾರನಾಯ್ಕ, ಧನ್ಯಕುಮಾರ ಮೇಗೇರಿ, ಕುಮಾರ ಕೊಣ್ಣೂರ, ಸಾವಂತ ತಳವಾರ, ಗೂಳಪ್ಪ ಅಸುದೆ, ಬಾನು ಜಮಾದಾರ, ರಜಿಯಾ ಹೊರಕೇರಿ, ಶಾಂತವ್ವ ಗುಡ್ಡಾಕಾಯು, ಇಮ್ರಾನ ಜಮಾದಾರ, ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಸೇರಿದಂತೆ ಅನೇಕರು ಇದ್ದರು.

Related posts: