RNI NO. KARKAN/2006/27779|Saturday, June 14, 2025
You are here: Home » breaking news » ಗೋಕಾಕ:ನಾಡದ್ರೋಹಿ ಎಂಇಎಸ್ ಗೆ ಕರಾಳ ದಿನ ಆಚರಿಸಲು ಅನುಮತಿ ನೀಡದಂತೆ ಆಗ್ರಹಿಸಿ ಕರವೇ ಮನವಿ

ಗೋಕಾಕ:ನಾಡದ್ರೋಹಿ ಎಂಇಎಸ್ ಗೆ ಕರಾಳ ದಿನ ಆಚರಿಸಲು ಅನುಮತಿ ನೀಡದಂತೆ ಆಗ್ರಹಿಸಿ ಕರವೇ ಮನವಿ 

ನಾಡದ್ರೋಹಿ ಎಂಇಎಸ್ ಗೆ ಕರಾಳ ದಿನ ಆಚರಿಸಲು ಅನುಮತಿ ನೀಡದಂತೆ ಆಗ್ರಹಿಸಿ ಕರವೇ ಮನವಿ

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 27 :

 

ನಾಡದ್ರೋಹಿ ಎಂಇಎಸ್ ಗೆ ಕರಾಳ ದಿನ ಆಚರಿಸಲು ಅನುಮತಿ ನೀಡದಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗುರುವಾರದಂದು ನಗರದಲ್ಲಿ ನಾಡದ್ರೋಹಿ ಎಂಇಎಸ್ ಸಂಘಟನೆ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ತಹಶೀಲ್ದಾರ ಮುಖಾಂತರ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಅರ್ಪಿಸಿದರು.

ಕಳೆದ ಹಲವಾರು ದಶಕಗಳಿಂದ ನಾಡದ್ರೋಹಿ ಎಂಇಎಸ್ ಸಂಘಟನೆ ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸುತ್ತಾ ಬಂದು ಕನ್ನಡ ಮತ್ತು ಕರ್ನಾಟಕವನ್ನು ಅವಮಾನಿಸುತ್ಯಾ ಬಂದಿದ್ದು, ಇದು ಅತ್ಯಂತ ಖೇದಕರ ವಿಷಯವಾಗಿದೆ. ಕರ್ನಾಟಕ ರಾಜ್ಯ ಅತ್ಯಂತ ವಿಜಂಭ್ರಣೆಯಿಂದ ರಾಜ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಎಂಇಎಸ್ ಸಂಘಟನೆ ಅದಕ್ಕೆ ಪ್ರತಿಯಾಗಿ ಅಂದು ಕರಾಳದಿನ ಆಚರಿಸಿ ರಾಜ್ಯ ಮತ್ತು ಭಾಷೆಯನ್ನು ಅವಮಾನಿಸುತ್ತಾ ಬರುತ್ತಿದ್ದರು ಸಹ ಸರಕಾರ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಾಡವಿರೋಧಿ ಸಂಘಟನೆ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಇದರ ಬಗ್ಗೆ ಪ್ರತಿವರ್ಷ ಕರವೇ ಹಾಗೂ ಇನ್ನುಳಿದ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಯಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ನೀಡಿದರು ಸಹ ಯಾವುದೇ ಪ್ರಯೋಜನವಾಗಿಲ್ಲ ಈಗಲಾದರೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಂಇಎಸ್ ಸಂಘಟನೆಗೆ ಕರಾಳ ದಿನಾಚರಣೆಗೆ ಅನುಮತಿ ನೀಡದೆ ಸಂಘಟನೆಯನ್ನು ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಕರವೇ ‌ಕಾರ್ಯಕರ್ತರು ಮನವಿಯಲ್ಲಿ ವಿನಂತಿಸಿದ್ದಾರೆ .

ಈ ಸಂದರ್ಭದಲ್ಲಿ ಅಧ್ಯಕ್ಷ ಬಸವರಾಜ ಖಾನಪ್ಪನವರ, ಮುಖಂಡರುಗಳಾದ ಸಾದಿಕ ಹಲ್ಯಾಳ, ದೀಪಕ್ ಹಂಜಿ, ಅಶೋಕ ಗಾಡಿವಡ್ಡರ, ಬಸವರಾಜ ಗಾಡಿವಡ್ಡರ, ಮಲ್ಲು ಸಂಪಗಾರ, ಹನಿಫ್ ಸನದಿ, ನಿಜಾಮ ನಧಾಪ್, ಮುಗುಟ ಪೈಲ್ವಾನ, ಮಹಾದೇವ ಮಕ್ಕಳಗೇರಿ, ಕಿರಣ ತೋಗರಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: