RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಸಾರ್ಥಕ ಬದುಕನ್ನು ಕಂಡುಕೊಳ್ಳಿ : ಶಾಸಕ ರಮೇಶ ಸಲಹೆ

ಗೋಕಾಕ:ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಸಾರ್ಥಕ ಬದುಕನ್ನು ಕಂಡುಕೊಳ್ಳಿ : ಶಾಸಕ ರಮೇಶ ಸಲಹೆ 

ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಸಾರ್ಥಕ ಬದುಕನ್ನು ಕಂಡುಕೊಳ್ಳಿ : ಶಾಸಕ ರಮೇಶ ಸಲಹೆ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 28 :

 

ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಧಾನ, ಧರ್ಮಾದಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾರ್ಥಕ ಬದುಕು ಕಂಡುಕೊಂಡು ಜೊತೆಗೆ ಮನಸ್ಸಿಗೆ ಶಾಂತಿ ನೆಮ್ಮದಿ ಪಡೆಯಬಹುದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ತಾಲೂಕಿನ ಕೊಳವಿ ಗ್ರಾಮದ ಶ್ರೀ ಬಸವಣ್ಣ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಮಾತನಾಡಿ, ಸಮಾಜದಲ್ಲಿ ದ್ವೇಷ ಅಸೂಯೆ ಬಿಟ್ಟು ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆಯೊಂದಿಗೆ ಜೀವನ ಸಾಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರುಗಳಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಕೊಳವಿ ಗ್ರಾಮ ಪಂಚಾಯತ ಸದಸ್ಯರು, ಗ್ರಾಮದ ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts: