ಗೋಕಾಕ:ಲಕ್ಷ್ಮೀ ದೇವಸ್ಥಾನದಲ್ಲಿ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ

ಲಕ್ಷ್ಮೀ ದೇವಸ್ಥಾನದಲ್ಲಿ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ
ಗೋಕಾಕ ನ 30 : ನಗರದ ಕೆಎಲ್ಇ ಸಂಸ್ಥೆಯ ಅಂಗ ಸಂಸ್ಥೆಗಳ ಪರಿವಾರದಿಂದ ನಗರದಲ್ಲಿ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು.
ಬಸವೇಶ್ವರ ವೃತ್ತದಿಂದ ಕೆಎಲ್ಇ ಪರಿವಾರದ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಆರತಿಯೊಂದಿಗೆ ಲಕ್ಷ್ಮೀ ದೇವಸ್ಥಾನದ ವರೆಗೂ ಮೆರವಣಿಗೆ ನಡೆಸಿ, ದೇವಸ್ಥಾನದ ಆವರಣದಲ್ಲಿ ದೀಪೋತ್ಸವಕ್ಕೆ ಚಾಲನೆ ನೀಡಿದರು. ನಂತರ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳಿಂದ ಭಕ್ತಿ ಗೀತೆಗಳ ಸಂಗೀತ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಸಂಸ್ಥೆಗಳ ಸಮೀತಿಯ ಅಧ್ಯಕ್ಷ ಎಮ್ ಡಿ ಚುನಮರಿ, ರೂಪಾ ಮುನವಳ್ಳಿ, ಜಿ ಎಮ್ ಅಂದಾನಿ, ಸೋಮಶೇಖರ ಮಗದುಮ, ವಿದ್ಯಾ ಮಗದುಮ, ಓಂಕಾರ ಅಂಗಡಿ, ಅನುಪಾ ಕೌಶಿಕ ಹಾಗೂ ಅಂಗಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.