RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ

ಗೋಕಾಕ:ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ 

ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ

ಗೋಕಾಕ ಡಿ 5 : ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಲೋಕೊಪಯೋಗಿ ಇಲಾಖೆಯ ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ 70ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ಮಾದರಿ ಮತಕ್ಷೇತ್ರವನ್ನಾ ಪರಿವರ್ತಿಸಲು ಶ್ರಮಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ಕೆಂಪಣ್ಣ ಮೈಲನ್ನವರ, ಗ್ರಾಪಂ ಅಧ್ಯಕ್ಷ ರಮೇಶ ಗಾಣಗಿ, ಉಪಾಧ್ಯಕ್ಷ ಲಕ್ಷ್ಮೀ ಅವರಾದಿ, ಶಂಕರಗೌಡ ಪಾಟೀಲ, ಮಹಾಂತೇಶ ಜನ್ಮಟ್ಟಿ, ಅಶೋಕ ಗೋಪಾಳೆ, ವೀರಭದ್ರ ಮೈಲನ್ನವರ, ಶಿವನಗೌಡ ಕಮತ ಸೇರಿದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಗ್ರಾಪಂ ಸದಸ್ಯರು, ಗ್ರಾಮಸ್ಥರು ಇತರರು ಇದ್ದರು.

Related posts: