RNI NO. KARKAN/2006/27779|Monday, July 14, 2025
You are here: Home » breaking news » ಮೂಡಲಗಿ:ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು : ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ:ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು : ಸರ್ವೋತ್ತಮ ಜಾರಕಿಹೊಳಿ 

ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು : ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ ಜ 3 : ಮನುಷ್ಯನಿಗೆ ಶರೀರ ಸದೃಢರಾಗಬೇಕಾದರೆ ಆಹಾರ ಎಷ್ಟು ಮುಖ್ಯವೋ ಅಷ್ಟೇ ಮನಸ್ಸು ಸದೃಢರಾಗಬೇಕಾದರೆ ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಮಂಗಳವಾರದಂದು ತಾಲೂಕಿನ ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಡೆಯುತ್ತಿರುವ 24 ಸತ್ಸಂಗ ಮಹೋತ್ಸವ ಮತ್ತು ಸಿದ್ದಲಿಂಗೇಶ್ವರ ಜಾತ್ರಾ ಹಾಗೂ ತೊಟ್ಟಿಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀಮಠದ ನಿಜಗುಣ ದೇವರಲ್ಲಿ ಸಹೋದರತ್ವ ಭಾವನೆವಿದೆ. ಅವರ ಜ್ಞಾನದ ಆಶೀರ್ವಾದ ನಾವೆಲ್ಲರೂ ಪಡೆದುಕೊಂಡು ಪುಣ್ಯವಂತರಾಗಬೇಕು. ದುಡ್ಡು ಕೊಟ್ಟರೇ ಜಮೀನು ಸಿಗುತ್ತದೆ ಆದರೆ ಪ್ರೀತಿ ಮತ್ತು ಸಹೋದರತ್ವದ ವಿಚಾರಗಳನ್ನು ಬೆಳೆಸಿಕೊಂಡು ಮಠಮಾನ್ಯಗಳ ಕಾರ್ಯಕ್ರಮಗಳಲ್ಲಿ ಯುವಜನತೆ ಪಾಲ್ಗೊಳ್ಳಬೇಕು. ಯುವ ಜನತೆ ಪುಣ್ಯಮಯ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು. ಅಹಂಕಾರವನ್ನು ಬಿಟ್ಟು ಸಹೋದರತ್ವ ಭಾವನೆ ಬೆಳೆಸಿಕೊಳ್ಳಬೇಕು.ಶ್ರೀಮಠವು ಧಾರ್ಮಿಕ ಕಾರ್ಯಕ್ರಮವನ್ನು ಮಾಡುತ್ತಾ ನಾಡಿನ ಸಮಸ್ತ ಭಕ್ತವೃಂದಕ್ಕೆ ಸಹಾಯ ಸಹಕಾರ ನೀಡುತ್ತಾ ಬಂದಿದೆ. ಅವರ ಜೊತೆಗೆ ನಮ್ಮ ಜಾರಕಿಹೊಳಿ ಮನೆತನವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದರು.
ಈ ಸಂದರ್ಭದಲ್ಲಿ ಬಸವಾನಂದ ಭಾರತಿ ಸ್ವಾಮಿಜಿ, ಚಿದಾನಂದ ಸ್ವಾಮಿಜಿ, ಸಿದ್ದಾನಂದ ಸ್ವಾಮಿಜಿ,ತೊಂಡಿಕಟ್ಟಿಯ ವೆಂಕಟೇಶ ಮಹಾರಾಜರು, ಬೀದರನ ಗಣೇಶಾನಂದ ಮಹಾರಾಜರು, ಶರೀಫ ಶಿವಯೋಗಿಗಳು ಸೇರಿದಂತೆ ಇತರರು ಇದ್ದರು.ಶ್ರೀಮಠದ ವತಿಯಿಂದ ದಾನಿಗಳಿಗೆ,ಗಣ್ಯರಿಗೆ, ಪೂಜ್ಯರಿಗೆ ಸನ್ಮಾನಿಸಲಾಯಿತು. ಗುರುನಾಥ ಶಾಸ್ತ್ರೀ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ವಿಜಯಪೂರದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿ ನಿಧನದ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ ಸಲ್ಲಿಸಲಾಯಿತು.

Related posts: