RNI NO. KARKAN/2006/27779|Saturday, June 14, 2025
You are here: Home » breaking news » ಬೆಳಗಾವಿ:ಮಾಜಿ ಸಚಿವ ದಿವಂಗತ ಡಿ.ಬಿ‌.ಇನಾಮದಾರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಭೇಟಿ

ಬೆಳಗಾವಿ:ಮಾಜಿ ಸಚಿವ ದಿವಂಗತ ಡಿ.ಬಿ‌.ಇನಾಮದಾರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಭೇಟಿ 

ಮಾಜಿ ಸಚಿವ ದಿವಂಗತ ಡಿ.ಬಿ‌.ಇನಾಮದಾರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಭೇಟಿ ಸಾಂತ್ವಾನ

ಬೆಳಗಾವಿ ಏ 27 : ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ. ಇನಾಮದಾರ ಅವರ ನಿಧನದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಡಿ.ಬಿ. ಇನಾಮದಾರ ಸ್ವಗ್ರಾಮ ನೇಗಿನಹಾಳದ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಗುರುವಾರದಂದು ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ನಿವಾಸದಲ್ಲಿ ಡಿ.ಬಿ. ಇನಾಮದಾರ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಸತೀಶ  ಜಾರಕಿಹೊಳಿ ಅವರು ಮೃತ ಡಿ.ಬಿ. ಇನಾಮದಾರ ಪುತ್ರ ವಿಕ್ರಮ್ ಇನಾಮದಾರ ಸೇರಿದಂತೆ ಕುಟುಂಬದವರಿಗೆ ಸಾಂತ್ವನ ಹೇಳಿದರು.”
ನಂತರ ಮಾತನಾಡಿದ ಸತೀಶ ಜಾರಕಿಹೊಳಿ ಅವರು, ಮಾಜಿ ಸಚಿವ ಡಿ.ಬಿ. ಇನಾಮದಾರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಜಾರಕಿಹೊಳಿ ಭಾವುಕರಾದರು. ಅವರು ಎಲ್ಲಾ ವರ್ಗದವರೊಂದಿಗೂ ಒಡನಾಟ ಹೊಂದಿದ್ದರು.ಪಕ್ಷ ಸಂಘಟನೆ ವಿಚಾರದಲ್ಲಿ ಸದಾ ಸಕ್ರಿಯರಾಗಿರುತ್ತಿದ್ಧರು. ಅವರ ಅಕಾಲಿಕ ಸಾವಿನಿಂದ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರಿಗೆ ದುಖಃ ಭರಿಸುವ ಶಕ್ತಿ ಕೊಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇನಾಮದಾರ  ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ವೇಳೆ ರಾಜು ಅಂಕಲಗಿ ,  ಕಾಂಗ್ರೆಸ್‌ ಮುಖಂಡರಾದ ಹಬೀಬ್‌ ಶೀಲ್ಲೆದಾರ, ಶಂಕರ ಹೊಳಿ ಸೇರಿದಂತೆ ಇತರ ಕಾಂಗ್ರೆಸ್‌ ಮುಖಂಡರು ಹಾಗೂ ಊರಿನ ಮುಖಂಡರು ಇದ್ದರು.”

Related posts: