ಗೋಕಾಕ:ಮಣಿಪುರ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಖಂಡಿಸಿ ರಾಷ್ಟ್ರಪತಿಗಳಿಗೆ ಮನವಿ

ಮಣಿಪುರ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಖಂಡಿಸಿ ರಾಷ್ಟ್ರಪತಿಗಳಿಗೆ ಮನವಿ
ಗೋಕಾಕ ಅ 7 : ಮಣಿಪುರ ರಾಜ್ಯದಲ್ಲಿ ಹೆಣ್ಣು ಮಕ್ಕಳ ಅತ್ಯಾಚಾರ ಬೆತ್ತಲೆ ಮೆರವಣಿಗೆ ಹಾಗೂ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ,ಹಿಂಸೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಕ್ರೈಸ್ತ ಮಹಾಸಬಾ ಗೋಕಾಕ ಘಟಕ ಹಾಗೂ ಕ್ರೈಸ್ತ ಸಮುದಾಯ ಟ್ರಸ್ಟ್ ಇವುಗಳ ಕಾರ್ಯಕರ್ತರು ಸೋಮವಾರದಂದು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಬಿನೈಜರ ಕರಬನ್ನವರ, ಸಂದೀಪ್ ಅನಿಗೋಳ, ಪ್ರವೀಣ್ ದಾಮನೆ, ರಮೇಶ ಮಾದರ, ಇರ್ಷಾದ್ ಪಟೇಲ್ ಸೇರಿದಂತೆ ಅನೇಕರು ಇದ್ದರು.
