RNI NO. KARKAN/2006/27779|Saturday, July 27, 2024
You are here: Home » breaking news » ಗೋಕಾಕ:ಕುಸ್ತಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸತ್ಕಾರ

ಗೋಕಾಕ:ಕುಸ್ತಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸತ್ಕಾರ 

ಕುಸ್ತಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸತ್ಕಾರ

ಗೋಕಾಕ ಸೆ 19 : ಶಿಕ್ಷಣ ಇಲಾಖೆ ಆಯೋಜಿಸಿದ್ಧ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ವಿದ್ಯಾರ್ಥಿಗಳು ಕುಸ್ತಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹಿನ್ನಲೆಯಲ್ಲಿ ಸೋಮವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಕ್ರೀಡಾಪಟುಗಳನ್ನು ಸತ್ಕರಿಸಲಾಯಿತು.
ತಾಲೂಕಿನ ಕೊಣ್ಣೂರು ಗ್ರಾಮದ ಆದರ್ಶ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಸುಶ್ಮೀತಾ ಜಾಡರ, ದಾನೇಶ್ವರ ಕಟ್ಟಿಮನಿ, ಜಿ ಎಮ್ ಪಿ ಎಲ್ ಪ್ರಾಥಮಿಕ ಶಾಲೆಯ ಪವನ ಕಟ್ಟಿಮನಿ, ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅಮೂಲ್ಯ ಕುಂದರಗಿ, ಪಾಯಸಾಗರ ಪ್ರೌಢ ಶಾಲೆಯ ಭೀಮು ಕಾಟೆ ಇರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ, ಶಾಸಕರ ಆಪ್ತಸಹಾಯಕರಾದ ಲಕ್ಷ್ಮೀಕಾಂತ ಎತ್ತಿನಮನಿ, ಸುರೇಶ ಸನದಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ದೈಹಿಕ ಶಿP್ಪ್ಷಣಾಧಿಕಾರಿ ಎಲ್ ಕೆ ತೋರನಗಟ್ಟಿ, ಮುಖಂಡರಾದ ಲಕ್ಕಪ್ಪ ಮಾಳಗಿ, ವಿಠ್ಠಲ ಗುಂಡಿ ಹಾಗೂ ಶಿಕ್ಷಕರು ಇದ್ದರು.

Related posts: