RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸಿ

ಗೋಕಾಕ:ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸಿ 

ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸಿ

ಗೋಕಾಕ ಸೆ 27 : ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಪ್ರೊ.ಬಿ ಕೃಷ್ಣಪ್ಪನವರು ಸ್ಥಾಪಿಸಿದ ಕನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ ಮಂಜುನಾಥ ಕೆ ಇವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆಯ ಬೈಲೂರಿನ ಶ್ರೀ ನಿಜಗುಣಾನಂದ ಸ್ವಾಮಿಜಿ ಹಾಗೂ ಮುಂಡರಗಿಯ ತೋಂಟದಾರ್ಯ ಮಠದ ಸ್ವಾಮಿಜಿಯವರು ಬುದ್ಧ, ಬಸವ, ಅಂಬೇಡ್ಕರ ಅವರ ತತ್ವ ಪ್ರಚಾರಕರು, ಪ್ರಗತಿಪರ ವಿಚಾರಗಳಿಂದ ಪ್ರಸಿದ್ಧರಾಗಿದ್ದಾರೆ. ಇತ್ತಿಚೀನ ದಿನಗಳಲ್ಲಿ ಕೆಲವು ಪಟ್ಟಬದ್ಧ ಹಿತಾಸಕ್ತಿಗಳು ಹಾಗೂ ದುಷ್ಕರ್ಮಿಗಳು ಬೇದರಿಕೆಯ ಕರೆಗಳನ್ನು ಮಾಡುತ್ತಿದ್ದು ಇಂತವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಸ್ವಾಮಿಜಿಯವರಿಗೆ ಸೂಕ್ತ ಭದ್ರತೆ ನೀಡಬೇಕು. ಇಲ್ಲದಿದ್ದಲ್ಲಿ ಎಲ್ಲ ದಲಿತಪರ ಸಂಘಟನೆಗಳು ಉಗ್ರಹೋರಾಟ ಮಾಡುವದಾಗಿ ಮನವಿಯಲ್ಲಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ರಮೇಶ ಮಾದರ, ಜಿಲ್ಲಾ ಸಂಚಾಲಕ ಕಾಡಪ್ಪ ಮೇಸ್ತ್ರಿ, ಸುನಚಿದಾ ಭಜಂತ್ರಿ, ರಾಮಣ್ಣ ಈಟಿ, ಕಮಲಾ ಕರೇಮ್ಮನವರ, ರಫೀಕ ಬೊಕರೆ, ಎಬಿನೇಜರ್ ಕರಬನ್ನವರ, ಶೆಟ್ಟೆಪ್ಪ ಮೇಸ್ತ್ರಿ, ಶಾಚಿತಪ್ಪ ಹಿರೇಮೇತ್ರಿ, ಇರ್ಶಾದ ಪಟೇಲ ಸೇರಿದಂತೆ ಅನೇಕರು ಇದ್ದರು.

Related posts: