ಯಮಕನಮರಡಿ:ಸತೀಶ ಪ್ರತಿಭಾ ಪುರಸ್ಕಾರ ಇಂದು ಹೆಮ್ಮರವಾಗಿ ಬೆಳೆದಿದೆ : ಸಚಿವ ಸತೀಶ ಜಾರಕಿಹೊಳಿ

ಸತೀಶ ಪ್ರತಿಭಾ ಪುರಸ್ಕಾರ ಇಂದು ಹೆಮ್ಮರವಾಗಿ ಬೆಳೆದಿದೆ : ಸಚಿವ ಸತೀಶ ಜಾರಕಿಹೊಳಿ
ಯಮಕನಮರಡಿ ನ 27 : ಸತೀಶ ಪ್ರತಿಭಾ ಪುರಸ್ಕಾರ
ಹತ್ತು ವರ್ಷದ ಹಿಂದೆ ಬಿತ್ತಿದ ಒಂದು ಸಣ್ಣ ಬೀಜ ಇಂದು ಹೆಮ್ಮರವಾಗಿ ಬೆಳೆದಿದ್ದು, ಮುಂದೆಯೂ ಈ ಕಾರ್ಯಕ್ರಮ ನಿರಂತರವಾಗಿ ನಡೆಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ರವಿವಾರದಂದು ಯಮಕನಮರಡಿ ಗ್ರಾಮದ ಎನ್.ಎಸ್.ಎಫ್ ಶಾಲಾ ಆವರಣದಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋದಕತ್ವದಲ್ಲಿ ಹಮ್ಮಿಕೊಂಡ 10 ನೇ ಸತೀಶ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸತೀಶ ಪ್ರತಿಬಾ ಪುರಸ್ಕಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಕೊರೋನಾ ಕಾರಣದಿಂದ ಸ್ಥಗಿತಗೊಳಿಸಲಾಗಿತ್ತು, ಈ ವರ್ಷದದಿಂದ ಎಲ್ಲಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು.
ಇಂದು ವಿವಿಧ ಸ್ವರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಕೆಲವರು ಗೆದ್ದಿರಬಹುದು, ಕೆಲವರು ಸೋತಿರಬಹುದು. ಇದೆ ಕೊನೆ ಎಂದು ಭಾವಿಸದೆ ವಿದ್ಯಾರ್ಥಿಗಳು ತಾವು ಕಂಡ ಕನಸುಗಳನ್ನು ಸಕಾರಗೊಳಿಸಲು ನಿರಂತರ ಪ್ರಯತ್ನ ಶೀಲರಾಗಿ ಇಂದಿನಿಂದ ಮುಂದಿನ ಕಾರ್ಯಕ್ರಮದ ಬಗ್ಗೆ ಗಮನ ಹರಿಸಿ ಸಾಧನೆ ಹಾದಿಯಲ್ಲಿ ಸಾಗಬೇಕು.ಸತೀಶ ಪ್ರತಿಭಾ ಪುರಸ್ಕಾರ ವೇದಿಕೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿಭೆಗಳನ್ನು ಅನಾವರಣಗೊಳಿಸಲು ಸಿದ್ದಗೊಳಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಆಸೀಫ್ (ರಾಜು) ಸೇಠ್, ಗಣೇಶ್ ಹುಕ್ಕೇರಿ, ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ , ಯುವ ನಾಯಕ ರಾಹುಲ್ ಜಾರಕಿಹೊಳಿ,ಸಂಘಟಕ ರಿಯಾಜ ಚೌಗಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.