RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ಕ್ರೀಡೆ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ : ಪಿಎಸ್ಐ ಕೆ.ವಾಲಿಕರ

ಗೋಕಾಕ:ಕ್ರೀಡೆ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ : ಪಿಎಸ್ಐ ಕೆ.ವಾಲಿಕರ 

ಕ್ರೀಡೆ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ : ಪಿಎಸ್ಐ ಕೆ.ವಾಲಿಕರ

ಗೋಕಾಕ ಜ 8 : ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದು ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಹೇಳಿದರು.

ಸೋಮವಾರದಂದು ನಗರದಲ್ಲಿ ಗೋಕಾಕ ಶಿಕ್ಷಣ ಸಂಸ್ಥೆಯ ಜಿಇಎಸ್ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಜೆಇಎಸ್ ಪ್ರೌಢಶಾಲೆ ಇವುಗಳ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ್ ಕಡಕೋಳ ಮಾತನಾಡಿ ಕ್ರೀಡೆಯು ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ. ಪರಿಣತಿಯನ್ನು ಗಳಿಸಲು ಸತತ ಸಾಧನೆ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಎಲ್.ಕೆ.ಜಿ, ಯೂಕೆಜಿ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಕವಾಯತ ನಡೆಸಿದರು.
ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಆರ್.ಎಂ ವಾಲಿ, ಮುಖ್ಯೋಪಾಧ್ಯಾಯ ಎಸ್.ಕೆ.ಮಠದ , ಶ್ರೀಮತಿ ಎಸ್.ಎಸ್.ಇಜೇರಿ, ಶ್ರೀಮತಿ ಎ.ಎಂ ಶೆಟ್ಟೆನ್ನವರ, ಶ್ರೀಮತಿ ವಾಯ್.ಎ.ಹನಗಂಡಿ, ಶ್ರೀಮತಿ ಕೆ.ಎಚ್.ಮೇಟಿ, ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ಶ್ರೀಮತಿ ಎನ್.ಎ. ಕಬ್ಬೂರ ನಿರೂಪಿಸಿದರು.

Related posts: