ಗೋಕಾಕ:ಸಾರ್ವಜನಿಕರಿಗೆ ನ್ಯಾಯ ದೊರಕಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಪ್ರಾಧಿಕಾರದ ನೂತನ ಅಧ್ಯಕ್ಷ ಸಿದ್ದಲಿಂಗ ದಳವಾಯಿ

ಸಾರ್ವಜನಿಕರಿಗೆ ನ್ಯಾಯ ದೊರಕಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಪ್ರಾಧಿಕಾರದ ನೂತನ ಅಧ್ಯಕ್ಷ ಸಿದ್ದಲಿಂಗ ದಳವಾಯಿ
ಗೋಕಾಕ ಮಾ 16 : ಜನಪರವಾಗಿ ಕಾರ್ಯ ನಿರ್ವಹಿಸಿ ಸಾರ್ವಜನಿಕರಿಗೆ ನ್ಯಾಯ ದೊರಕಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗೋಕಾಕ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ
ಸಿದ್ದಲಿಂಗ ದಳವಾಯಿ ಹೇಳಿದರು.
ಶನಿವಾರದಂದು ನಗರದ ಯೋಜನಾ ಪ್ರಾಧಿಕಾರದ ಕಛೇರಿಯಲ್ಲಿ ನಡೆದ ಅಧಿಕಾರಿಗಳು ಸ್ವೀಕಾರ ಸಮಾರಂಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಾಧಿಕಾರದ ಕಾರ್ಯದರ್ಶಿ ಅವಟಿ ಅವರಿಂದ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು.
ನನ್ನ ಅಧಿಕಾರ ಅವಧಿಯಲ್ಲಿ ಎಲ್ಲಾ ಕಾರ್ಯಗಳು ನ್ಯಾಯಯುತವಾಗಿ ನಡೆಯಲಿದ್ದು, ಪ್ರಾಧಿಕಾರಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ಭಯಪಡದೆ ಕಛೇರಿಗೆ ಬಂದು ಸುಲಭವಾಗಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ ಅವರು ಗೋಕಾ ನಗರಸಭೆ ಮತ್ತು ನಗರ ಯೋಜನಾ ಪ್ರಾಧಿಕಾರ ಎರಡು ಪರಸ್ಪರ ಸಹಕಾರದಿಂದ ಕಾರ್ಯ ಮಾಡಬೇಕು ಈಗಾಗಲೇ ನಮಗೆ ಗೋತಿರುವ ಹಾಗೆ ನಗರಸಭೆಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಕೆಲ ಸಮಸ್ಯೆಗಳು ಇವೆ . ಅವುಗಳನ್ನು ಸರಿಪಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲಾಗುವುದು. ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕವಾಗಲು ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಅಭಿನಂದನೆಗಳು ಸಲ್ಲಿಸಿದ ದಳವಾಯಿ ಅವರು ಕಾಂಗ್ರೆಸ್ ಸರಕಾರ ಬಡವರ ಪರವಾದ ಸರಕಾರವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಿವಾನಂದ ಪಾಟೀಲ, ಸಾದಿಕ ಲಾಡಖಾನ, ಮಾಯಪ್ಪ ತಹಶೀಲ್ದಾರ, ಸದಸ್ಯರಾಗಿ ಅಧಿಕಾರವನ್ನು ವಹಿಸಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ, ಡಾ.ಮಹಾಂತೇಶ ಕಡಾಡಿ, ಚಂದ್ರಶೇಖರ್ ಕೊಣ್ಣೂರ, ಶಿವು ಪಾಟೀಲ್, ವಿವೇಕ ಜತ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು