ಗೋಕಾಕ:ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತ್ವರಿತಗತಿಯಲ್ಲಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಆರೋಗ್ಯ ಸಚಿವ ಗೂಂಡುರಾವ ಸೂಚನೆ
ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತ್ವರಿತಗತಿಯಲ್ಲಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಆರೋಗ್ಯ ಸಚಿವ ಗೂಂಡುರಾವ ಸೂಚನೆ
ಗೋಕಾಕ ಸೆ 11 : ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತ್ವರಿತಗತಿಯಲ್ಲಿ 100 ಹಾಸಿಗೆಗಳ ಹೆಚ್ಚುವರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರದಂದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮುಂದಿನ ಎರಡು ವರ್ಷಗಳಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಶೇ.40ರಷ್ಟು ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು.ರಾಜ್ಯಾದ್ಯಂತ ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ, ಪಿಎಚ್ಒ ಹಾಗೂ ಎಚ್ಎಒ ಹುದ್ದೆಗಳು ಶೇ.40ರಷ್ಟು ಖಾಲಿ ಇವೆ. ಇದರಿಂದಾಗಿ ಜನರಿಗೆ ತೊಂದರೆಯಾಗುತ್ತಿದ್ದು, ಸಿಬ್ಬಂದಿ ನೇಮಕಕ್ಕೆ ಅನುಮತಿ ನೀಡುವಂತೆ ಹಣಕಾಸು ಇಲಾಖೆಯನ್ನು ಕೋರಲಾಗಿದೆ ಎಂದರು.
ನಗರದಲ್ಲಿ ನಕಲಿ ವೈದ್ಯರ ಹಾವಳಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿಯಿದೆ. ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸುವ ಕೆಲಸ ಮತ್ತು ಅವರ ವಿರುದ್ದ ಕ್ರಮ ಕೈಗೊಳ್ಳುವ ಕೆಲಸ ಈಗಾಗಲೇ ಇಲಾಖೆ ಮಾಡಿದ್ದೇವೆ. ಇದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪತಿ ವೈದ್ಯರು ನೀಲಿ ಬೋರ್ಡ್ ಹಾಕೋದು ಕಡ್ಡಾಯ ಮಾಡಲಾಗಿದೆ ಎಂದ ಅವರು ನಗರದಲ್ಲಿ ಅಂತಹ ಯಾವುದೇ ಪ್ರಕರಣಗಳು ಕಂಡು ಬಂದರೆ ಕಾನೂನು ರೀತಿ ಕಠಿಣ ಕ್ರಮ ಜರುಗಿಸುವಂತೆ ವೈದ್ಯರಿಗೆ ಸೂಚಿಸಿದರು.
ಡೆಂಗ್ಯೂ ಪ್ರಕರಣಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಸಿದ ಅವರು ರಾಜ್ಯದಲ್ಲಿ ಹೆಚ್ಚಾಗಿದ ಡೆಂಗ್ಯೂ ಪ್ರಕರಣಗಳು ಈಗ ಸ್ವಲ್ಪ ಕಡಿಮೆಯಾಗಿದ್ದು . ಈ ಹಿನ್ನೆಲೆಯಲ್ಲಿ ಡೆಂಗ್ಯೂ ಜ್ವರವನ್ನು ʼಸಾಂಕ್ರಾಮಿಕ ರೋಗʼ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.ಜೊತೆಗೆ ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸದವರಿಗೆ ದಂಡ ಕೂಡ ಹಾಕಲಾಗುವುದು ಎಂದ ಅವರು ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಿ ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ವೈದ್ಯರಿಗೆ ಸೂಚಿಸಿದರು.
ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ನಗರದ ಶಿಥಲಾವಸ್ಜೆಯಲ್ಲಿರುವ ಹಳೆ ಆಸ್ಪತ್ರೆಯನ್ನು ಹೊಸದಾಗಿ ನಿರ್ಮಾಣ ಮಾಡಬೇಕು ಎಂದು ಪತ್ರ ಬರೆದಿದ್ದಾರೆ. ಆದರೆ ಪ್ರಸ್ತುತ ಇಲಾಖೆಯಲ್ಲಿಯ ಅನುದಾನವನ್ನು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗೋಕಾಕ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಇತರ ಕಡೆಗಳಲ್ಲಿ ಆಸ್ಪತ್ರೆಯ ದುರಸ್ಥಿ ಕಾರ್ಯ ಮಾಡಲು ಈಗಾಗಲೇ 7 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ಕೈಗೊಂಡಿದ್ದು, ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು. ತಜ್ಞ ವೈದ್ಯರನ್ನು ನೇಮಕ ಮಾಡುವ ಕಾರ್ಯ ನಡೆಯುತ್ತಿದ್ದು, ಆದಷ್ಟು ಶೀಘ್ರ ಎಲ್ಲಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರನ್ನು ನೇಮಕ ಮಾಡಲಾಗುವುದು. ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸುವಲ್ಲಿ ಜಾಗೆಯಿಂದಲೇ ಬಾಯೋಮ್ಯಾರ್ಟಿಕ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ ಅವರು ರಾತ್ರಿ ಸಮಯದಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಮುಡಾ ಪ್ರಕರಣ ಮತ್ತು ಸಿಎಂ ಬದಲಾವಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲಾ , ಸರಕಾರವು ಬಿಳುವುದಿಲ್ಲ , ಐದು ವರ್ಷಗಳವರೆಗೆ ಸಿದ್ದರಾಮಯ್ಯ ಅವರೆ ಸಿಎಂ ಇರುತ್ತಾರೆ ಯಾರು ಆಕಾಂಕ್ಷಿಗಳು ಇಲ್ಲ ಯಾವ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಾಗಿ ಇಲ್ಲ ಬಿಜೆಪಿಯವರೆ ಬರೀ ಸುಳ್ಳು ಹೇಳುತ್ತಾರೆ . ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಲ್ಲವೂ ಸರಿಯಾಗಿದೆ ಎಂದು ಜಾರಿಕೊಂಡರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾ ವೈದ್ಯಾಧಿಕಾರಿ ಡಾ. ಶರಣಪ್ಪ ಗಡೇದ, ತಾಲೂಕು ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಯುವ ಮುಖಂಡ ಅಮರನಾಥ ಜಾರಕಿಹೊಳಿ, ಡಾ.ಮಹಾಂತೇಶ ಕಡಾಡಿ, ಸುರೇಶ ಸನದಿ,ಡಾ.ಮಂಗಳಾ ಸನದಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ , ಅರವಿಂದ ದಳವಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.