ಗೋಕಾಕ:ಅಪ್ಪನ ವಿರುದ್ಧ ಸೋತು, ಮಗನ ವಿರುದ್ಧ ಗೆದ್ದ ಪಠಾಣ್ ಗೆ ಬೆನ್ನೆಲುಬಾದ ಸಾಹುಕಾರ ಸತೀಶ್ !
ಅಪ್ಪನ ವಿರುದ್ಧ ಸೋತು, ಮಗನ ವಿರುದ್ಧ ಗೆದ್ದ ಪಠಾಣ್ ಗೆ ಬೆನ್ನೆಲುಬಾದ ಸಾಹುಕಾರ ಸತೀಶ್ !
ಗೋಕಾಕ ನ 23 : ಬಹು ನಿರೀಕ್ಷಿತ ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗ್ರೆಸ್ ಪಕ್ಷ ಭಾರಿ ಜಯಭೇರಿ ಗಳಿಸಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ.ಯೋಗೇಶ್ವರ ಸಂಡೂರು ನಲ್ಲಿ ಶ್ರೀಮತಿ ಅನ್ನಪೂರ್ಣ ತುಕಾರಾಂ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ಯಾಸೀರ ಪಠಾಣ ಭಾರಿ ಅಂತರದಿಂದ ಗೆದ್ದು ಬಿಗಿದೆ.
ಈ ಗೆಲುವಿಗೆ ಸಿದ್ದರಾಮಯ್ಯ ನೇತೃತ್ವದ ಕೈ ಸರಕಾರದ ಹಲವು ಮಂತ್ರಿಗಳು ಮೂರುಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ತಮ್ಮ, ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ತಮ್ಮ ಸಮುದಾಯದ ಮತಗಳನ್ನು ಕೂಡ್ರಿಕರಿಸಲು ಹಗಳಿರುಳು ಪ್ರಯತ್ನ ಮಾಡಿದ್ದಾರೆ. ಅದರಲ್ಲಿ ಒಂದಿಷ್ಟು ಡಿಪ್ರೇಂಟ್ ಆಗಿ ತಮ್ಮನ್ನು ತಾವು ಸರ್ಮಪಿಸಿಕೊಂಡು ಸುಮಾರು 4 ತಿಂಗಳಿನಿಂದ ತಮ್ಮೆಲ್ಲಾ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಶಿಗ್ಗಾಂವಿ ಮತಕ್ಷೇತ್ರದಲ್ಲಿ ಟಿಕಾಠಿ ಹೂಡಿ ಮುಸ್ಲಿಂ ಸುಮುದಾಯದ ಹಿಂದೆ ನಾನಿದ್ದೇನೆ ಎಂದು ಬರೀ ಬಾಯಿ ಮಾತಿನಲ್ಲೇ ಹೇಳದೆ ನುಡಿದಂತೆ ನಡೆದು ಶಿಗ್ಗಾಂವಿ ಮತಕ್ಷೇತ್ರದ ಮುಸ್ಲಿಂ ಹಾಗೂ ಅಹಿಂದ ಮತದಾರರನ್ನು ಒಂದೆಡೆ ಸೇರಿಸಿ ಅವರ ಮತಗಳ ಶಕ್ತಿಯನ್ನು ಅವರಿಗೆ ತೋರಿಸಿಕೊಟ್ಟ ಬೆಳಗಾವಿಯ ಸಾಹುಕಾರ ಸತೀಶ ಜಾರಕಿಹೊಳಿ ಶಿಗ್ಗಾಂವಿ ಗೆಲುವಿನ ಹಿಂದಿನ ಬಹುದೊಡ್ಡ ಶಕ್ತಿ ಎಂದರೆ ಅತಿಶಯೋಕ್ತಿಯಲ್ಲ.
ಮುಸ್ಲಿಂ ಸಮುದಾಯದ ನಾಯಕರಾಗಿ ಹೊರಹೊಮ್ಮಿದರಾ? ಸತೀಶ ಜಾರಕಿಹೊಳಿ : ಕರ್ನಾಟಕ ರಾಜ್ಯದ 224 ಮತಕ್ಷೇತ್ರಗಳಲ್ಲಿ ಅಂದಾಜು 10 ರಿಂದ 12 ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕ ಆಗಿದ್ದರು ಬರೀ ಬೆರಳೆಣಿಕೆಯಷ್ಟು ಮುಸ್ಲಿಂ ಸಮುದಾಯದ ಶಾಸಕರು ಆಯ್ಕೆಯಾಗುತ್ತಿದ್ದರು. ಚುನಾವಣೆ ಎದುರಿಸಲು ಎಲ್ಲಾ ಸಾಮರ್ಥ್ಯವಿದ್ದರು ಸಹ ಮತದಾರರು ಅದರಲ್ಲೂ ಅಹಿಂದ ಮತದಾರರು ಮುಸ್ಲಿಂ ಅಭ್ಯರ್ಥಿಗೆ ಮತ ಹಾಕುತ್ತಾರಾ ಎಂಬ ಸಂದೇಹ ಒಂದು ಕಡೆಯಾದರೆ, ಇನ್ನೊಂದು ಕಡೆ ರಾಜ್ಯ ಹಾಗೂ ದೇಶದಲ್ಲಿ ಪ್ರಸ್ತುತ ನಡೆದಿರುವ ಮುಸ್ಲಿಂಯೇತರ ಪ್ರಸಹಣಗಳು ಇದೆಲ್ಲಾ ಒಟ್ಟು ಸೇರಿಸಿದರೆ ಮುಸ್ಲಿಂ ಸಮುದಾಯದ ಮತಗಳ ನಿರ್ಣಾಯಕ ಇದ್ದರೂ ಸಹ ಮುಸ್ಲಿಂ ನಾಯಕರು ಚುನಾವಣೆಗೆ ಸ್ವರ್ಧಿಸುವ ಧೈರ್ಯ ಮಾಡುತ್ತಿಲ್ಲಾ ಎಂಬ ಮಾತುಗಳು ರಾಜ್ಯದ ವಿವಿಧ ಕಡೆಗಳಲ್ಲಿ ಕೇಳಿ ಬರುತ್ತಿದ್ದವು. ಆದರೆ ಅದನ್ನು ಹೊಗಲಾಡಿಸುವ ನಿಟ್ಟಿನಲ್ಲಿ ರಾಜ್ಯದ ಲೋಕೋಪಯೋಗಿ ಸಚಿವ ಅಹಿಂದ ಸಮುದಾಯ ಅಪ್ರತಿಮ ನಾಯಕ ,ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಜಾಗರೂಕತೆಯಿಂದ ವಹಿಸಿಕೊಂಡು ಚುನಾವಣೆಗೆ ಘೋಷಣೆಯಾಗುವ ಮುನ್ನವೇ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಠಿಕಾಣಿ ಹೂಡಿ. ಕ್ಷೇತ್ರದ ಜನರ ನಾಡಿಮಿಡಿತವನ್ನು ಅರಿತು. ಮುಸ್ಲಿಂ ಸಮುದಾಯದ ಹಿಂದೆ ನಾನಿದ್ದೇನೆ ಎಂದು ಭರವಸೆ ನೀಡಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ಅವರಲ್ಲಿ ಭರವಸೆ ಮೂಡಿಸಿ ಶಿಗ್ಗಾಂವಿಯಲ್ಲಿ ಮುಸ್ಲಿಂ ಸಮುದಾಯ ಶಕ್ತಿ ಏನು ಎಂಬುದನ್ನು ತೋರಿಸಿಕೊಟ್ಟು ತಮ್ಮ ರಾಜಕೀಯ ಆಪ್ತ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಬಿಸಿ ಮುಟ್ಟಿಸಿ, ರಾಜ್ಯದ ಮುಸ್ಲಿಂ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಮುಖಭಂಗ : 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!
ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 87,120 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 1,12,635 ಮತಗಳನ್ನ ಪಡೆದಿದ್ದಾರೆ. ಇಬ್ಬರ ಮಧ್ಯ ಒಟ್ಟು 25,515 ಸಿ.ಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.
ಇನ್ನೂ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 1,00,585 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 86,960 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಇವರ ಮಧ್ಯೆ 14,428 ಮತಗಳ ಅಂತರವಿದೆ ಎಂದು ತಿಳಿದುಬಂದಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ಇ ತುಕಾರಾಂ ಅವರು 93, 051 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿಯಾದ ಬಂಗಾರು ಹನುಮಂತು ಅವರು 83,483 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಅನ್ನಪೂರ್ಣ ಅವರು 9,568 ಮತಗಳ ಅಂತರದಿಂದ ಗೆಲವು ದಾಖಲಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಅಷ್ಟೇ ಬಾಕಿ ಇದೆ ಎನ್ನಲಾಗಿದೆ.