ಮೂಡಲಗಿ:ತ್ರಿಭಾಷಾ ಸೂತ್ರವನ್ನು ಪ್ರತಿಯೊಬ್ಬ ಕನ್ನಡಿಗನೂ ಎತ್ತಿ ಹಿಡಿಯುವ ಕೆಲಸ ಮಾಡಬೇಕು : ಸರ್ವಾಧ್ಯಕ್ಷ ಪ್ರೋ ಚಂದ್ರಶೇಖರ್ ಅಕ್ಕಿ ಅಭಿಮತ

ತ್ರಿಭಾಷಾ ಸೂತ್ರವನ್ನು ಪ್ರತಿಯೊಬ್ಬ ಕನ್ನಡಿಗನೂ ಎತ್ತಿ ಹಿಡಿಯುವ ಕೆಲಸ ಮಾಡಬೇಕು : ಸರ್ವಾಧ್ಯಕ್ಷ ಪ್ರೋ ಚಂದ್ರಶೇಖರ್ ಅಕ್ಕಿ ಅಭಿಮತ
(ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ)
ಮೂಡಲಗಿ ನ 24 : ತ್ರಿಭಾಷಾ ಸೂತ್ರವನ್ನು ಪ್ರತಿಯೊಬ್ಬ ಕನ್ನಡಿಗನೂ ಎತ್ತಿ ಹಿಡಿಯುವ ಕೆಲಸ ಮಾಡಬೇಕು’ ಎಂದು 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ ಅಕ್ಕಿ ಹೇಳಿದರು.
ಪಟ್ಟಣದ ಆರ್.ಡಿ.ಎಸ್ ಕಾಲೇಜು ಆವರಣದಲ್ಲಿ ಜರುಗಿದ, ಬೆಳಗಾವಿ ಜಿಲ್ಲಾ 16ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲಿಗೆ ಗೋಕಾಕ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಜಿಲ್ಲಾ ಸಮ್ಮೇಳನದ ಸಮ್ಮೇಳನಾಧ್ಯಕ್ಷನಾಗಿರುವುದು ನನ್ನ ಭಾಗ್ಯ. ವಿದ್ಯಾರ್ಥಿ ಜೀವನದಿಂದಲೂ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ನಾನು ಶಿಕ್ಷಕನಾದರೂ ಸಹ ಆ ಗುರುವಿನ ಸ್ಥಾನಕ್ಕೆ ಚುತಿ ಬರೆದಂತೆ 1998ರಲ್ಲಿ ಕ.ಸಾ.ಪ ತಾಲೂಕಾಧ್ಯಕ್ಷರಾಗಿ 150 ರೂ, ಅನುದಾನದಲ್ಲಿ ಸಮ್ಮೇಳನ ಮಾಡುವುದರ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ ಎಂದರು.
ಗೋಕಾಕ-ಮೂಡಲಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಾಡುವ ಬಗ್ಗೆ ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಸ್ತಾಪಿಸಿದ್ದಾರೆ. ಜಿಲ್ಲೆಯಲ್ಲಿ ಆಗುವ ಆ ಕಾರ್ಯಕ್ರಮವನ್ನು ಈ ಎರಡು ಅವಳಿ ತಾಲೂಕಿನಲ್ಲಿ ಮಾಡುವಂತಾಗಲ್ಲಿ ಎಂದರು.
ಬಿಇಓ ಅಜೀತ ಮನ್ನಿಕೇರಿ ಮಾತನಾಡಿ, ಪಟ್ಟಣದ ಹಾಗೂ ತಾಲೂಕಿನ ಪೂಜ್ಯರ ಸಹಕಾರದೊಂದಿಗೆ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಅತ್ಯುತ್ತಮವಾದ ಸಮ್ಮೇಳನ ಜರಗುವುದಕ್ಕೆ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಹಾಗೂ ಕನ್ನಡಾಭಿಮಾನಿಗಳು ಮುತವರ್ಜಿವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.
ವಿಧಾನಪರಿಷತ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ದೊರಕಿದ್ದು, ಅಲ್ಲದೇ ಕನ್ನಡಕ್ಕೆ ಇರುವ ಕೀರ್ತಿ ಬೇರೆ ಭಾಷೆಗೆ ಇಲ್ಲ. ಈ ಭಾಗದ ಪಾರಿಜಾತ ಇಡೀ ಸಾಹಿತ್ಯ ಕ್ಷೇತ್ರಕ್ಕೆ ಒಂದು ಮುನ್ನಡಿಯನ್ನು ಬರೆದಿದೆ. ವೀರ, ಧೀರರು, ಮಹಾಕವಿಗಳು ಹುಟ್ಟಿದ ಕನ್ನಡಾಂಬೆಯ ನಾಡು ಇದ್ದಾಗಿದ್ದು, ಕನ್ನಡ ನಾಡು ನುಡಿ ಉಳಿವಿಗಾಗಿ ಕ.ಸಾ.ಪ ಮಾಡುತ್ತಿರುವ ಕಾರ್ಯಕ್ಕೆ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಮುನ್ಯಾಳ- ಬಾಗೋಜಿಕೊಪ್ಪದ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಕ.ಸಾ.ಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ, ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲ್ಕರ, ನಿವೃತ್ತ ಪ್ರಾಚಾರ್ಯ ಎಸ್.ಎಂ. ಕಮದಾಳ, ಬಿ.ವಾಯ್.ಶಿವಾಪೂರ, ವಿ.ಎಸ್. ಹಂಚಿನಾಳ, ಆರ್.ಟಿ. ಲಂಕೆಪ್ಪನವರ, ಆರ್.ಎಸ್. ಅಳಗುಂಡಿ, ಎಸ್.ಆಯ್. ಭಾಗೋಜಿ, ಭಾರತಿ ಮದಭಾವಿ ಹಾಗೂ ಅನೇಕ ಉಪಸ್ಥಿತರಿದ್ದರು.