RNI NO. KARKAN/2006/27779|Monday, June 16, 2025
You are here: Home » breaking news » ಘಟಪ್ರಭಾ:ದಿನಾಂಕ 2ರಿಂದ ಘಟಪ್ರಭಾ ರೈಲೂ ನಿಲ್ದಾಣದಲ್ಲಿ ವಂದೇ ಭಾರತ ರೈಲು ನಿಲುಗಡೆ : ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಸಮಾರಂಭ : ಸಂಸದ ಈರಣ್ಣ ಮಾಹಿತಿ

ಘಟಪ್ರಭಾ:ದಿನಾಂಕ 2ರಿಂದ ಘಟಪ್ರಭಾ ರೈಲೂ ನಿಲ್ದಾಣದಲ್ಲಿ ವಂದೇ ಭಾರತ ರೈಲು ನಿಲುಗಡೆ : ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಸಮಾರಂಭ : ಸಂಸದ ಈರಣ್ಣ ಮಾಹಿತಿ 

ದಿನಾಂಕ 2ರಿಂದ ಘಟಪ್ರಭಾ ರೈಲೂ ನಿಲ್ದಾಣದಲ್ಲಿ ವಂದೇ ಭಾರತ ರೈಲು ನಿಲುಗಡೆ : ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಸಮಾರಂಭ : ಸಂಸದ ಈರಣ್ಣ ಮಾಹಿತಿ

ಘಟಪ್ರಭಾ ಡಿ 29 : ಪುಣೆ-ಹುಬ್ಬಳ್ಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಜನವರಿ 02, 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಂದೇ ಭಾರತ್ ಎಕ್ಸಪ್ರೆಸ್ ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು.

ಜನವರಿ 3 ರಂದು ಹುಬ್ಬಳಿ ನಿಲ್ದಾಣದಿಂದ ಮುಂಜಾನೆ 05.15ಕ್ಕೆ ಹೊರಟು ಮುಂಜಾನೆ 07.23ಕ್ಕೆ ಘಟಪ್ರಭಾ ರೈಲು ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ವಾರದಲ್ಲಿ ಮೂರು ಬಾರಿ ಹುಬ್ಬಳ್ಳಿಯಿಂದ (ಬುಧವಾರ, ಶುಕ್ರವಾರ ಹಾಗೂ ರವಿವಾರ) ಮತ್ತು ಪುಣೆಯಿಂದ (ಗುರುವಾರ, ಶನಿವಾರ ಮತ್ತು ಸೋಮವಾರ) ಸಂಚರಿಸಲಿದೆ. ಘಟಪ್ರಭಾ ನಿಲ್ದಾಣದಲ್ಲಿ 2 ನಿಮಿಷಗಳ ಕಾಲ ನಿಲುಗಡೆಯಾಲಿದೆ. ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟು ಮುಂದೆ ಈ ರೈಲುನ್ನು ಪ್ರತಿದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಹಾಗೂ ಪ್ರಯಾಣಿಕರು ಈ ರೈಲು ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಸದ ಈರಣ್ಣ ಕಡಾಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts: