ಗೋಕಾಕ:ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ
ಗೋಕಾಕ ಫೆ 18 : ಸೇವೆಯಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯವ್ಯಾಪ್ತಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಂಬಲ ವ್ಯಕ್ತಪಡಿಸಿದರು.
ಮಂಗಳವಾರದಂದು ನಗರದ ಆಡಳಿತ ಸೌಧದ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಗಳು ನ್ಯಾಯಯುತವಾದ ಬೇಡಿಕೆಗಳಿಗೆ ಸರ್ಕಾರ ಶೀಘ್ರದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕು. ಅವರ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕು. ಬೇಡಿಕೆಗಳು ಕುರಿತು ನಮ್ಮ ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಗೋಕಾಕ ತಾಲೂಕಾಧ್ಯಕ್ಷ ಡಿ.ಎಸ್.ದೇಸಾಯಿ, ಉಪಾಧ್ಯಕ್ಷ ಪಿ.ಜಿ.ಬಾರಿಮರದ, ಪ್ರಧಾನ ಕಾರ್ಯದರ್ಶಿ ವಿ.ಪಿ.ಗಾಯದ, ಎಸ್.ಎಮ್.ಪೂಜೇರಿ, ಎಸ್.ಎನ್.ಹಿರೇಮಠ, ವಾಯ್.ಬಿ.ಕಡಕೋಳ, ಎಸ್.ಎಲ್.ಮಾಳೇದ, ಬಿ.ಎನ್.ಜೋಶಿ, ಬಿ.ಎಲ್.ಕೆಂಚರೆಡ್ಡಿ, ವಿ.ಆಯ್.ಪಾಟೀಲ, ಬಿ.ಎಮ್. ಗಾಡಿ, ಎಮ್.ಎ.ಹಂಚಿನಾಳ, ಎಸ್.ಬಿ.ಪಾಶ್ಚಾಪೂರೆ, ಆರ್.ಎಸ್.ಕಾಗಲಕರ,ಎ.ಎ.ಭಜಂತ್ರಿ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಇದ್ದರು.