RNI NO. KARKAN/2006/27779|Friday, June 13, 2025
You are here: Home » breaking news » ಬೆಳಗಾವಿ:ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು

ಬೆಳಗಾವಿ:ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು 

ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು

ಬೆಳಗಾವಿ ಮೇ 30 : ಧಾರವಾಡ ತಾಲೂಕಿನ ಕೈಗಾರಿಕಾ ಪ್ರದೇಶಗಳಿಗೆ ಬೆಳಗಾವಿ ಜಿಲ್ಲೆ ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಸ್ಥಗಿತಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಶುಕ್ರವಾರದಂದು ಪ್ರತಿಭಟನೆ ನಡೆಯಿಸಿದರು .

ನಗರದ ಸಂಗೋಳ್ಳಿ ರಾಯಣ್ಣ ವೃತ್ತ ( ಆರ್‌.ಟಿ.ಓ) ಕಛೇರಿಯ ಎದುರು ಸೇರಿದ ಕರವೇ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಮನವಿ ಅರ್ಪಿಸಿದರು.

ಬೆಳಗಾವಿ ಜಿಲ್ಲೆಯ ಜೀವನಾಡಿ ಹಿಡಕಲ್ ಜಲಾಶಯದಿಂದ ಧಾರವಾಡ ಜಿಲ್ಲೆ ಕೈಗಾರಿಕಾ ಪ್ರದೇಶಗಳಿಗೆ ನೀರು ಪೂರೈಕೆಗೆ ಸದ್ದಿಲ್ಲದೇ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಇದನ್ನು ವಿರೋಧಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಆದಿಯಾಗಿ ಹಲವು ಸಂಘಟನೆಗಳು ನಮ್ಮ ನೀರು ನಮ್ಮ ಹಕ್ಕು ಘೋಷವಾಕ್ಯದಡಿ ಹೋರಾಟ ಕೈಗೊಂಡಾಗ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಜಿಲಸಂಪನ್ಮೂಲ ಇಲಾಖೆ ಮೇ ೨ರಂದು ಕಾಮಗಾರಿಗೆ ಸಂಬಧಿಸಿದಂತೆ ಆದೇಶ ನೀಡಿದ್ದು ಈಗ ಕಾಮಗಾರಿ ಮತ್ತೆ ಶುರುವಾಗಿದೆ. ಅಚ್ಚರಿಯ ವಿಷಯ ಎಂದರೇ ಕಾಮಗಾರಿ ನಡೆಯುವ ಜಮೀನಿನ ರೈತರಿಗೆ ಕಾಮಗಾರಿಯ ಬಗ್ಗೆ ಗೊತ್ತಿಲ್ಲ.
ಹಿಡಕಲ್ ಜಲಾಶಯ ಬೆಳಗಾವಿ ಜಿಲ್ಲೆ ಅಷ್ಟೇ ಅಲ್ಲ ನೆರೆಯ ಬಾಗಲಕೋಟ ಜಿಲ್ಲೆಯ ರೈತರ ಭೂಮಿಗೆ ಹಾಗೂ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಜಿಲಾಶಯವಾಗಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ, ಎಡದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಪ್ರತಿ ವರ್ಷ ರೈತರು ಪ್ರತಿಭಟನೆ ನಡೆಸುತ್ತಾರೆ.
ಇಂತಹ ಸಂದರ್ಭದಲ್ಲಿ ಹಿಡಕಲ್ ಜಲಾಶಯದಿಂದ ಧಾರವಾಡ ಜಿಲ್ಲೆಯ ಇಂಡಸ್ಟ್ರೀಯಲ್ ನೋಡ್ ಕೈಗಾರಿಕಾ ಪ್ರದೇಶಕ್ಕೆ ಪ್ರತಿ ವರ್ಷ 0.58 ಟಿಎಂಸಿ ನೀರು ಬಿಡುಗಡೆ ಮಾಡಿದ್ದೇ ಅದಲ್ಲಿ ಬೇಸಿಗೆಯಲ್ಲಿ ಹಿಡಕಲ್ ಜಲಾನಯನ ಪ್ರದೇಶದ ರೈತರಿಗೆ ಹಾಗೂ ಬೆಳಗಾವಿ ನಗರಕ್ಕೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಪ್ರಸ್ತುತ ಯೋಜನೆ ಬಗ್ಗೆ ಖುದ್ದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರಿಗೂ ಗೊತ್ತಿರಲಿಲ್ಲ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಯೋಜನೆಗೆ ಅನುಮತಿ ಇಲ್ಲ ಎಂದು ಕಾಮಗಾರಿ ನಿಲ್ಲಿಸಿದ್ದ ಜಲಸಂಪನ್ಮೂಲ ಇಲಾಖೆಯಿಂದ ಅನುಮತಿ ಪಡೆದು ಕಾಮಗಾರಿ ಶುರುವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಆದಿಯಾಗಿ ಬೆಳಗಾವಿ ಜಿಲ್ಲೆಯ ಜನರು ವಿರೋಧಿಸುತ್ತಿದ್ದರೂ ಈ ಯೋಜನೆ ಆರಂಭಿಸಿದ್ದೇಕೆ? ಸರ್ಕಾರಕ್ಕೆ ರೈತರ ಹಿತಕ್ಕಿಂತ ಬಂಡವಾಳಶಾಹಿಗಳ ಹಿತವೇ ಮುಖ್ಯವಾಗಿದೆಯೇ? ಎಂಬುದು ನಮಗೆ ಅರ್ಥವಾಗುತ್ತಿಲ್ಲ.

ಪ್ರಸ್ತುತ ಯೋಜನೆಯನ್ನು ಸರ್ಕಾರ ಕೈ ಬಿಡಬೇಕು. ಮೇ 2 ರಂದು ಜಲಸಂಪನ್ಮೂಲ ಇಲಾಖೆ ಹೊರಡಿಸಿದ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ತಮ್ಮಲ್ಲಿ ವಿನಯಪೂರ್ವಕವಾಗಿ ವಿನಂತಿ ಮಾಡುತ್ತೇವೆ. ಒಂದು ವೇಳೆ ಕಾಮಗಾರಿ ಮುಂದುವರಿದರೆ ಕಾಮಗಾರಿ ನಡೆಯುವ ಸ್ಥಳಕ್ಕೆ ಹೋಗಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕರಾದ ಸುರೇಶ್ ಗವ್ವನ್ನವರ, ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಉಪಾಧ್ಯಕ್ಷರುಗಳಾದ ಗಣೇಶ್ ರೋಕಡೆ, ರಾಜು ನಾಶೀಪುಡಿ, ಜಿಲ್ಲಾ ಮುಖಂಡರುಗಳಾದ ಹೊಳೆಪ್ಪ ಸುಳದಾಳ, ಬಾಳು ಜಡಗಿ ಸೇರಿದಂತೆ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರುಗಳು, ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts: