ಗೋಕಾಕ:ಕಾಂಗ್ರೇಸ್ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ : ಮಹಾಂತೇಶ ಕವಟಗಿಮಠ
ಕಾಂಗ್ರೇಸ್ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ : ಮಹಾಂತೇಶ ಕವಟಗಿಮಠ
ಗೋಕಾಕ ನ 5: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಭಾನುವಾರ ಸಂಜೆ ಅರಭಾವಿ ಮಂಡಲ ಬಿಜೆಪಿ ಏರ್ಪಡಿಸಿದ್ದ ನವಕರ್ನಾಟಕ ಪರಿವರ್ತನಾ ಯಾತ್ರೆಯ ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಳೆದ ನಾಲ್ಕುವರೆ ವರ್ಷದ ಅವಧಿಯಲ್ಲಿ ಕಾಂಗ್ರೇಸ್ ಸರ್ಕಾರದ ಸಾಧನೆ ಶೂನ್ಯ. ಭ್ರಷ್ಠಾಚಾರ, ಸ್ವಜನ ಪಕ್ಷಪಾತದಿಂದ ಜನತೆಗೆ ದ್ರೋಹವೆಸಗಿದೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಅಧಿಕಾರದ ಮದ ನೆತ್ತಿಗೇರಿದೆ. ಸರ್ವಾಧಿಕಾರತ್ವದಿಂದ ವರ್ತಿಸುತ್ತಿರುವ ಇಂತಹ ಲಜ್ಜೆಗೆಟ್ಟ ಸರ್ಕಾರವನ್ನು ಮನೆಗೆ ಕಳುಹಿಸಲೇಬೇಕು. ಸ್ವಚ್ಛ ಹಾಗೂ ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವದಿಸಬೇಕೆಂದು ಅವರು ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ 18 ರ ಪೈಕಿ 15 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಅದರಲ್ಲೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಜ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಮತಗಳ ಅಂತರದಿಂದ ಗೆಲವು ಸಾಧಿಸುವ ಮೂಲಕ ಇತಿಹಾಸ ಸೃಷ್ಠಿಸಲಿದ್ದಾರೆಂದು ತಿಳಿಸಿದರು.
ನವ್ಹೆಂಬರ 18 ರಂದು ನವಕರ್ನಾಟಕ ಪರಿವರ್ತನಾ ಯಾತ್ರೆ ಅರಭಾವಿ ಮತಕ್ಷೇತ್ರಕ್ಕೆ ಆಗಮಿಸಲಿದ್ದು, ಅಭೂತಪೂರ್ವ ಸ್ವಾಗತ ನೀಡಬೇಕು. ಯಾತ್ರೆಯನ್ನು ಅದ್ಧೂರಿಯಾಗಿ ಏರ್ಪಡಿಸುವಂತೆ ಸಂಘಟಕರಿಗೆ ಕವಟಗಿಮಠ ತಿಳಿಸಿದರು.
ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ವಹಿಸಿದ್ದರು.
ಜಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗೂಳಪ್ಪ ಹೊಸಮನಿ, ಗುರುಪಾದ ಕಳ್ಳಿ, ರಾಜ್ಯ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡರ, ಧನಂಜಯ ಜಾಧವ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಪ್ರಕಾಶ ಮಾದರ, ಮುಖಂಡರಾದ ಕೆಂಚಗೌಡ ಪಾಟೀಲ, ಅಶೋಕ ಪರುಶೆಟ್ಟಿ, ಹನಮಂತ ತೇರದಾಳ, ರಾವಸಾಬ ಬೆಳಕೂಡ, ಬಸವಂತ ಕಮತಿ, ಬಿ.ಡಿ.ಪಾಟೀಲ, ಎ.ಟಿ. ಗಿರಡ್ಡಿ, ಎಂ.ಎಂ. ಪಾಟೀಲ, ಶಿದ್ಲಿಂಗ ಕಂಬಳಿ, ಮುತ್ತೆಪ್ಪ ಕುಳ್ಳೂರ, ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪರಸಪ್ಪ ಬಬಲಿ ಸ್ವಾಗತಿಸಿದರು. ರೇವಣ್ಣಾ ಕನಕಿಕೋಡಿ ವಂದಿಸಿದರು.