ಗೋಕಾಕ:ನಗರದಲ್ಲಿ ಶ್ರದ್ಧಾ–ಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ

ನಗರದಲ್ಲಿ ಶ್ರದ್ಧಾ–ಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ
ಗೋಕಾಕ ಜೂ 7 : ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ನಗರದಲ್ಲಿ ಶ್ರದ್ಧಾ–ಭಕ್ತಿಯಿಂದ ಆಚರಿಸಿದರು.
ನಗರದ ಈದ್ಗಾ ಮೈದಾನದಲ್ಲಿ ಶನಿವಾರದಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸಕಲ ಜೀವರಾಶಿಗೆ ಒಳಿತಾಗುವಂತೆ ದೇವರಲ್ಲಿ ಪ್ರಾರ್ಥಿಸಿದರು.
ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿ, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಈದ್ಗಾ ಮೈದಾನಕ್ಕೆ ಆಗಮಿಸಿದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆ. ಮೌಲ್ವಿ, ಧರ್ಮ ಗುರುಗಳ ಉಪದೇಶ ಆಲಿಸಿ ಹಬ್ಬ ಆಚರಿಸಿದರು.
ಪ್ರಾರ್ಥನೆ ಬಳಿಕ ಒಬ್ಬರನೊಬ್ಬರು ಆಲಂಗಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ನಗರದ ಪ್ರಮುಖ ಸ್ಥಳಗಳಲ್ಲಿ ಸಿಪಿಐ ಸುರೇಶ್ ಬಾಬು ಮತ್ತು ಪಿಎಸ್ಐ ಕೆ.ವಾಲಿಕರ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ತಾಲೂಕಿನ ಅಮೀರಸಾಬ ಹಾಜಿ ಕುತಬುದ್ದೀನ ಬಸ್ಸಾಪೂರಿ, ಅಂಜುಮನ ಇಸ್ಲಾಂ ಕಮಿಟಿಯ ಅಧ್ಯಕ್ಷ ಜಾವೇದ್ ಗೋಕಾಕ, ನಗರಸಭೆ ಸದಸ್ಯರಾದ ಅಬ್ದುಲರಹೆಮಾನ ದೇಸಾಯಿ, ಕುತುಬುದ್ದೀನ ಗೋಕಾಕ, ಮುಖಂಡರುಗಳಾದ ಇಲಾಹಿ ಖೈರದಿ, ಮಲೀಕ ಪೈಲವಾನ್, ಇಸ್ಮಾಯಿಲ್ ಜಮಾದಾರ, ಇಸ್ಮಾಯಿಲ್ ಗೋಕಾಕ, ಮುಸ್ತಾಕ ಖಂಡಾಯತ್, ಜಾಕೀರ್ ಕುಡಚಿಕರ, ಜಹಾಂಗೀರ ಜಮಾದಾರ ಸೇರಿದಂತೆ ಅನೇಕ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.