RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ವೋಟ್ ಬ್ಯಾಂಕ್‍ಗಾಗಿ ಟಿಪ್ಪು ಜಯಂತಿ ಆಚರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿ ಸರಿಯಲ್ಲ: ನಾರಾಯಣ ಮಠಾಧಿಕಾರಿ

ಗೋಕಾಕ:ವೋಟ್ ಬ್ಯಾಂಕ್‍ಗಾಗಿ ಟಿಪ್ಪು ಜಯಂತಿ ಆಚರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿ ಸರಿಯಲ್ಲ: ನಾರಾಯಣ ಮಠಾಧಿಕಾರಿ 

ವೋಟ್ ಬ್ಯಾಂಕ್‍ಗಾಗಿ ಟಿಪ್ಪು ಜಯಂತಿ ಆಚರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿ ಸರಿಯಲ್ಲ: ನಾರಾಯಣ ಮಠಾಧಿಕಾರಿ

ಗೋಕಾಕ ನ 7: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುವುದರ ವಿರುದ್ಧ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ಹಾಗೂ ರಸ್ತೆ ನಡೆಸಿ ತಹಶೀಲದಾರರ ಮುಖಾಂತರ ರಾಜ್ಯಪಾಲರಿಗೆ ಮಂಗಳವಾರದಂದು ಮನವಿ ಸಲ್ಲಿಸಿದರು.

ನಗರದ ನಾಗನಾಥ ಮಂಗಲ ಕಾರ್ಯಾಲಯದಲ್ಲಿ ಸೇರಿದ ಕಾರ್ಯಕರ್ತರು ಮೆರವಣಿಗೆ ಮೂಲಕ ಶ್ರೀ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಅಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ನಂತರ ತಹಶೀಲದಾರರಿಗೆ ಮನವಿ ಅರ್ಪಿಸಿದರು.

ವಿಶ್ವ ಹಿಂದೂ ಪರಿಷತ್ತಿನ ಬೆಳಗಾವಿ ವಿಭಾಗದ ಕಾರ್ಯದರ್ಶಿ ನಾರಾಯಣ ಮಠಾಧಿಕಾರಿ ಮಾತನಾಡಿ ಓರ್ವ ಮತಾಂಧ, ಹಿಂದು ಧರ್ಮದ ಹಾಗೂ ವಿರೋಧಿಯಾಗಿದ್ದ ಟಿಪ್ಪು ಜಯಂತಿಯನ್ನು ಕೇವಲ ವೋಟ್ ಬ್ಯಾಂಕ್‍ಗಾಗಿ ಆಚರಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ನೀತಿ ಸರಿಯಲ್ಲ. ಟಿಪ್ಪುವಿನ ಆಡಳಿತಾವಧಿಯಲ್ಲಿ ಮಂಡ್ಯ, ಮೈಸೂರು, ಕೊಡಗು, ಮಲಬಾರಿನ ಜನತೆಯ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದರು, ಕನ್ನಡ ಭಾಷೆಯ ವಿರೋಧಿಯಾಗಿದ್ದ ಟಿಪ್ಪುವನ್ನು ವೈಭವೀಕರಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ನಾಡಿನ ಯುವ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಭಜರಂಗದಳದ ಜಿಲ್ಲಾ ಸಂಚಾಲಕ ಸದಾಶಿವ ಗುದಗಗೋಳ ಮಾತನಾಡಿ ಮದಕರಿ ನಾಯಕನಿಗೆ ವಿಷವುಣ್ಣಿಸಿ, ಆತನ ಸಾವಿಗೆ ಕಾರಣನಾದ ಹೈದರಾಲಿ ಹಾಗೂ ನಾಯಕ ಸಮುದಾಯದ ಸೈನಿಕರನ್ನು ಮತಾಂತರಿಸಿದ ಟಿಪ್ಪುವನ್ನು ವೈಭವಿಕರಿಸಿ ಮಾತನಾಡುತ್ತಿರುವ ಅವರದೇ ಸಮುದಾಯದ ರಾಜಕೀಯ ನಾಯಕರಿಗೆ ಶೋಭೆ ತರುವಂಥದ್ದಲ್ಲ. ತತ್ವ ಸಿದ್ದಾಂತಗಳನ್ನು ಬದಿಗಿಟ್ಟು ರಾಜಕೀಯ ಮಾಡಬೇಡಿ ಎಂದರಲ್ಲದೆ ನಮ್ಮ ಸಂಸ್ಕøತಿ, ಪರಂಪರೆ, ಆಚಾರ, ವಿಚಾರ ವಿರುದ್ಧವಾಗಿ ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವುದನ್ನು ಭಜರಂಗದಳ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ಖಂಡಿಸುತ್ತಿದೆ ಎಂದು ಹೇಳಿದರು.
ಜಿಲ್ಲಾ ಸಹ ಸಂಚಾಲಕ ಲಕ್ಷ್ಮಣ ಮಿಶಾಳೆ ಮಾತನಾಡಿದರು.

ಪ್ರತಿಭಟನೆಯಲ್ಲಿ ಪ್ರವೀಣ ಚುನಮರಿ, ಆನಂದ ಕುಡಚಿ, ಗುರು ಬೆನವಾಡ, ಅಕ್ಷಯ ಕಾಡದೇವರಮಠ, ದಯಾನಂದ ಮಾವರಕರ, ಸಂತೋಷ ಗೋಂಧಳಿ, ಸುನೀಲ ಧುಮಾಳ, ರಾಮಸಿದ್ದ ಬಡೆಪ್ಪಗೋಳ, ಶಿವು ಮಾಯಗೊಂಡ ಸೇರಿದಂತೆ ಅನೇಕರು ಇದ್ದರು.

Related posts: