ಗೋಕಾಕ: ನಿಧಾನಗತಿ ಕಾಮಗಾರಿ ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ
ಗೋಕಾಕ: ನಿಧಾನಗತಿ ಕಾಮಗಾರಿ ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ
ಗೋಕಾಕ ಮೇ 12:ನಗರದಲ್ಲಿ ನಡೆಯುತ್ತಿರುವ 24/7 ಕುಡಿಯುವ ನೀರು ಸರಬರಾಜು ಕಾಮಗಾರಿ ಸೇರಿದಂತೆ ನಗರದಲ್ಲಿ ವಿವಿಧ ಕಾಮಗಾರಿ ಕಾರ್ಯ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಶೀಘ್ರ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ನಗರಸಭೆ ಹಾಗೂ ಕುಡಿಯುವ ನೀರು ಸರಬರಾಜು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.
ಅವರು, ಶುಕ್ರವಾರದಂದು ನಗರದ ನಗರಸಭೆ ಸಭಾ ಭವನದಲ್ಲಿ ಜರುಗಿದ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳು ಬೇಗನೆ ಪೂರ್ಣಗೊಳ್ಳದೇ ಇದ್ದದ್ದು ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷತೆ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದರು.
ನಗರದ ರಸ್ತೆಯ ಮಧ್ಯೆ ಅಲ್ಲಲ್ಲಿ ಕಾಮಗಾರಿಗಾಗಿ ಗುಂಡಿ ತೋಡಿರುವದಕ್ಕೆ ಗೋಕಾವಿಯ ಜನತೆ ಚಕಾರ ಶಬ್ಧ ಎತ್ತದೇ, ಸಹನಾ ಶಕ್ತಿಯುಳ್ಳವರಾಗಿದ್ದಾರೆ. ಕಾರಣ ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ನಗರದ ಜನೆತೆಗೆ ಅನುಕೂಲ ಮಾಡಿಕೊಡಬೇಕು. ಬರುವ ಜೂನ್. 17 ರೊಳಗಾಗಿ ಕಾಮಗಾರಿ ಪೂರ್ಣಗೊಳಿಸದೇ ಇದ್ದರೆ ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ಹೇಳಿದರು.
ಸಭೆಯಲ್ಲಿ ನಗರಾಧ್ಯಕ್ಷ ತಳದಪ್ಪ ಅಮ್ಮಣಗಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಜತ್ತಿ, ಸ್ಥಾಯಿ ಸಮಿತಿ ಚೇರಮನ್ ಭಗವಂತ ಹುಳ್ಳಿ, ನಗರಸಭೆ ಪೌರಾಯುಕ್ತ ವ್ಹಿ.ಸಿ.ಚಿನ್ನಪ್ಪಗೌಡರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಠ್ಠಲ ತಡಸಲೂರ, ನಗರಸಭೆ ಸದಸ್ಯರಾದ ಎಸ್.ಎ. ಕೋತವಾಲ, ಪರಶುರಾಮ ಭಗತ, ಭೀಮಶಿ ಭರಮಣ್ಣವರ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರಿಗೊಲ್ಲರ, ಮುತ್ತುರಾಜ ಜಮಖಂಡಿ, ಜಾಕೀರಹುಸೇನ ನದಾಫ್, ಸಿದ್ದಪ್ಪ ಹುಚ್ಚರಾಯಪ್ಪಗೊಳ, ಜಯಾನಂದ ಹುಣಶ್ಯಾಳ, ವಿಶ್ವನಾಥ ಬಿಳ್ಳೂರ, ಗಿರೀಶ ಖೋತ, ಬಾಬು ಶೇಖಬಡೆ ಸೇರಿದಂತೆ ಅಧಿಕಾರಿಗಳು ಸಿಬ್ಬಂಧಿ ವರ್ಗದವರು ಇದ್ದರು.