ಘಟಪ್ರಭಾ:ಅರಭಾವಿ ಪಟ್ಟಣದ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ 4.25 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ
ಅರಭಾವಿ ಪಟ್ಟಣದ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ 4.25 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ
ಘಟಪ್ರಭಾ ಡಿ 2: ಅರಭಾವಿ ಪಟ್ಟಣದ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ 4.25 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಯು ಟೆಂಡರ್ ಹಂತದಲ್ಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಶನಿವಾರದಂದು ಸಮೀಪದ ಅರಭಾವಿ ಆಂಜನೇಯ ದೇವರ ದರ್ಶನ ಪಡೆದು ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಮಾತನಾಡುತ್ತಿದ್ದ ಅವರು, ಜನೇವರಿ ತಿಂಗಳಲ್ಲಿ ಕಾಮಗಾರಿಯು ಆರಂಭವಾಗಲಿದೆ ಎಂದು ಹೇಳಿದರು.
4.25 ಕೋಟಿ ರೂ. ವೆಚ್ಚದ ನಗರೋತ್ಥಾನ ಯೋಜನೆಯಡಿ 2.25 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗಳು, 1.10 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ, 60 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯಗಳ ನಿರ್ಮಾಣ ಹಾಗೂ ಒಳಚರಂಡಿ ನಿರ್ಮಾಣಕ್ಕೆ 30 ಲಕ್ಷ ರೂ. ವೆಚ್ಚದ ಕಾಮಗಾರಿಗಳು ಒಳಗೊಂಡಿದೆ ಎಂದು ಅವರು ತಿಳಿಸಿದರು.
ಅರಭಾವಿ ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಇನ್ನೂ ಹೆಚ್ಚಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಜನರ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಸರ್ಕಾರದ ಯೋಜನೆಗಳ ಆಯ್ಕೆಯಲ್ಲಿ ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಸರ್ಕಾರಿ ಸೌಲಭ್ಯಗಳನ್ನು ದೊರಕಿಸಿಕೊಡುವಂತೆ ಪಟ್ಟಣ ಪಂಚಾಯತಿ ಸದಸ್ಯರಿಗೆ ಸೂಚನೆ ನೀಡಿದರು. ಅರಭಾವಿ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಕ್ಷೇತ್ರವನ್ನಾಗಿ ಮಾಡುವ ಮಹತ್ವಾಕಾಂಕ್ಷೆ ಹೊಂದಿರುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಇದೇ ಸಂದರ್ಭದಲ್ಲಿ ಆಂಜನೇಯ ದೇವಸ್ಥಾನದಲ್ಲಿ ಅರ್ಚಕ ಮಾರುತಿ ಪೂಜೇರಿ ಅವರು ಸತ್ಕರಿಸಿದರು.
ಶಂಕರ ಬಿಲಕುಂದಿ, ರಾಯಪ್ಪ ಬಂಡಿವಡ್ಡರ, ಭೀಮಪ್ಪ ಹಳ್ಳೂರ, ನಿಂಗಪ್ಪ ಇಳಿಗೇರ, ಕೆಂಪಣ್ಣಾ ಕಡಲಗಿ, ಸಾತಪ್ಪ ಜೈನ್, ವಿಠ್ಠಲ ಸವದತ್ತಿ, ರಮೇಶ ಮಾದರ, ಮಹಾಂತೇಶ ನೇಮಗೌಡರ, ಲಕ್ಷ್ಮಣ ನಿಂಗನ್ನವರ, ಕೆಂಚಪ್ಪ ಸಂಪಗಾಂವಿ, ಸುನೀಲ-ಅನೀಲ ಜಮಖಂಡಿ, ಮಹಾದೇವ ಗುಡಿತೋಟ, ರಮೇಶ ಸಂಪಗಾಂವಿ, ವಿಠ್ಠಲ ದೇವುಗೋಳ, ಸತ್ತೆಪ್ಪ ಬಡಾಯಿ, ಬಸವರಾಜ ಆಲೋಶಿ, ಮೋಹನ ಬಂಡಿವಡ್ಡರ, ಭೀಮಪ್ಪ ಕಡ್ಡಿ, ಆನಂದ ನಿಪನಾಳ, ಸಂಜು ಖಾನಪ್ಪನವರ, ನಾಗಪ್ಪ ಹೊಲದವರ, ವಿಠ್ಠಲ ಸಂತುಗೋಳ, ತಮ್ಮಣ್ಣಾ ಜಮಖಂಡಿ, ಕುಮಾರ ಪೂಜೇರಿ, ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.