RNI NO. KARKAN/2006/27779|Monday, June 16, 2025
You are here: Home » breaking news » ಮೂಡಲಗಿ:ಸಮಾಜ ಕಲ್ಯಾಣ ಇಲಾಖೆಯಿಂದ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ ಭವನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ

ಮೂಡಲಗಿ:ಸಮಾಜ ಕಲ್ಯಾಣ ಇಲಾಖೆಯಿಂದ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ ಭವನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ 

ಸಮಾಜ ಕಲ್ಯಾಣ ಇಲಾಖೆಯಿಂದ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ ಭವನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ

ಮೂಡಲಗಿ ಡಿ 22 : ಸಮಾಜ ಬಾಂಧವರು ಅಂಬೇಡ್ಕರ ಭವನವನ್ನು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯಿಂದ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಅಂಬೇಡ್ಕರ ಭವನವನ್ನು ಮಂಗಳವಾರದಂದು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಈ ಭವನವನ್ನು ಸ್ವಚ್ಛವಾಗಿಟ್ಟುಕೊಂಡು ಒಳ್ಳೆಯ ವಿಧಾಯಕ ಕಾರ್ಯಗಳಿಗಾಗಿ ಉಪಯೋಗಿಸಿಕೊಳ್ಳಬೇಕು. ದಲಿತ ಬಾಂಧವರ ಅನುಕೂಲಕ್ಕೆ ಇಂತಹ ಭವನಗಳನ್ನು ಈಗಾಗಲೇ ಕ್ಷೇತ್ರದಲ್ಲಿ ನಿರ್ಮಿಸಲಾಗಿದೆ. ಜೊತೆಗೆ ಒಂದಾಗಿ-ಒಗ್ಗಟ್ಟಾದರೆ ಮಾತ್ರ ಸಮಾಜ ಸುಧಾರಣೆಯಾಗುತ್ತದೆ. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಆರ್ಥಿಕಾಭಿವೃದ್ಧಿ ಬಲವರ್ಧನೆಗೊಳಿಸುವಂತೆ ಅವರು ಹೇಳಿದರು.

ಶಿಕ್ಷಣವೇ ಸಮಾಜ ಸುಧಾರಣೆಯಲ್ಲಿ ಪ್ರಮುಖ ಅಸ್ತ್ರವಾಗಿದ್ದು ತಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದಲ್ಲಿ ಮುಂದೆ ಬರುವಂತೆ ಬಾಂಧವರಿಗೆ ಕರೆ ನೀಡಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಸ್ಥಳೀಯ ಶ್ರೀಪಾದಬೋಧ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.
ಪುರಸಭೆ ಅಧ್ಯಕ್ಷೆ ಕಮಲವ್ವಾ ಹಳಬರ, ಉಪಾಧ್ಯಕ್ಷ ಆರ್.ಪಿ.ಸೋನವಾಲ್ಕರ, ಮುಖಂಡರಾದ ವೀರಣ್ಣಾ ಹೊಸೂರ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ರಾಮಣ್ಣಾ ಹಂದಿಗುಂದ, ಸಂತೋಷ ಸೋನವಾಲ್ಕರ, ರವಿ ಸಣ್ಣಕ್ಕಿ, ಅಶೋಕ ನಾಯಿಕ, ಜಿ.ಟಿ. ಸೋನವಾಲ್ಕರ, ಅಜೀಜ ಡಾಂಗೆ, ಹನಮಂತ ತೇರದಾಳ, ಭೀಮಶಿ ಮಗದುಮ್ಮ, ಮಲ್ಲಿಕಾರ್ಜುನ ಕಬ್ಬೂರ, ಮಲೀಕ ಹುಣಶ್ಯಾಳ, ಸಮಾಜ ಕಲ್ಯಾಣ ಇಲಾಖೆಯ ಎಡಿ ಶ್ರೀಶೈಲ ಕಲ್ಲಪ್ಪನವರ, ಭೂಸೇನಾ ನಿಗಮದ ಎಇಇ ಆರ್.ಪಿ. ನಾರಾಯಣಕರ, ದಲಿತ ಸಂಘಟನೆಗಳ ಮುಖಂಡರಾದ ಲಕ್ಷ್ಮಣ ತೆಳಗಡೆ, ರಮೇಶ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ಭೀಮಶಿ ಸಣ್ಣಕ್ಕಿ, ಪ್ರಕಾಶ ಮಾದರ, ಪ್ರಭು ಬಂಗೆನ್ನವರ, ಸತ್ತೆಪ್ಪ ಕರವಾಡಿ, ಶಾಬಪ್ಪ ಸಣ್ಣಕ್ಕಿ, ಮುಂತಾದವರು ಉಪಸ್ಥಿತರಿದ್ದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಖಿಲ ಭಾರತೀಯ ಯುವ ರಕ್ಷಣಾ ಪಡೆಯ ಮೂಡಲಗಿ ಘಟಕವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸುತ್ತಿರುವುದು.

ಯುವ ರಕ್ಷಣಾ ಪಡೆ ಉದ್ಘಾಟನೆ : ಹೊಸದಾಗಿ ಅಸ್ಥಿತ್ವಕ್ಕೆ ಬಂದ ಅಖಿಲ ಭಾರತೀಯ ರಕ್ಷಣಾ ಪಡೆಯ ಮೂಡಲಗಿ ಘಟಕವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉದ್ಘಾಟಿಸಿದರು. ಸಂಘಟನೆಯ ಗೌರವಾಧ್ಯಕ್ಷ ಸಚೀನ ಸೋನವಾಲ್ಕರ, ಅಧ್ಯಕ್ಷ ರಮಜಾನ ಬಿಜಾಪೂರ, ಉಪಾಧ್ಯಕ್ಷ ಗಂಗಾಧರ ಬಂಗೆನ್ನವರ, ಮೂಡಲಗಿ ಗಣ್ಯ ನಾಗರೀಕರು ಉಪಸ್ಥಿತರಿದ್ದರು.
ಹಾಲು ಉತ್ಪಾದಕರ ಸಂಘದ ಉದ್ಘಾಟನೆ : ಇಲ್ಲಿಯ ಗವಿ ಮಠ ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸಿದರು. ಸಾನಿಧ್ಯವನ್ನು ಶ್ರೀಪಾದಬೋಧ ಮಹಾಸ್ವಾಮಿಗಳು ವಹಿಸಿದ್ದರು. ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮೂಡಲಗಿ ಪಟ್ಟಣದ ವಿವಿಧ ಸಂಘ-ಸಂಸ್ಥೆಗಳು ಮುಖಂಡರುಗಳು ಸತ್ಕರಿಸಿದರು.

Related posts: