RNI NO. KARKAN/2006/27779|Monday, February 16, 2026
You are here: Home » breaking news » ರಾಯಬಾಗ:ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ರಾಯಬಾಗ:ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು 

ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ರಾಯಬಾಗ ಡಿ 31: ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ನಡೆದಿದೆ
ವ್ಯಾಪಾರಿ ಲಾಲಸಾಬ ಬೇಪಾರಿ ಎಂಬಾತ ಹಸುವಿನ ಎಳೆಯ ಕರುಗಳ ಮಾಂಸ ಸಾಗಾಟ ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದ್ದು, ಆರ್‌ಎಸ್ಎಸ್, ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ತಡೆದಿದ್ದಾರೆ. ಅಲ್ಲದೇ ಲಾಲಸಾಬನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಂದಿಗುಂದ ಗ್ರಾಮದಿಂದ ಗೋವಾ, ಮಹಾರಾಷ್ಟ್ರಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ

ಇನ್ನು ಲಾಲಸಾಬನಿಗೆ ಥಳಿಸಿದ್ದರಿಂದ ಆತನ ಕುಟುಂಬದವರು ಕಣ್ಣೀರಿಟ್ಟಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Related posts: