RNI NO. KARKAN/2006/27779|Sunday, June 15, 2025
You are here: Home » breaking news » ಘಟಪ್ರಭಾ:ಕಲ್ಲೋಳಿ ಪಟ್ಟಣಕ್ಕೆ ನಗರೋತ್ಥಾನ ಯೋಜನೆಯಡಿ 5 ಕೋಟಿ ರೂ. ಅನುದಾನ ಮಂಜೂರಾಗಿದೆ : ಶಾಸಕ ಬಾಲಚಂದ್ರ

ಘಟಪ್ರಭಾ:ಕಲ್ಲೋಳಿ ಪಟ್ಟಣಕ್ಕೆ ನಗರೋತ್ಥಾನ ಯೋಜನೆಯಡಿ 5 ಕೋಟಿ ರೂ. ಅನುದಾನ ಮಂಜೂರಾಗಿದೆ : ಶಾಸಕ ಬಾಲಚಂದ್ರ 

ಕಲ್ಲೋಳಿ ಪಟ್ಟಣಕ್ಕೆ ನಗರೋತ್ಥಾನ ಯೋಜನೆಯಡಿ 5 ಕೋಟಿ ರೂ. ಅನುದಾನ ಮಂಜೂರಾಗಿದೆ : ಶಾಸಕ ಬಾಲಚಂದ್ರ

ಘಟಪ್ರಭಾ ಜ 26 : ಕಳೆದ 20 ವರ್ಷಗಳಿಂದ ಪವಾಡ ಪುರುಷ ಸತ್ಯಾನಂದ ಮಹಾಸ್ವಾಮಿಗಳ ಪುಣ್ಯಾರಾಧನೆ ಮಾಡಿಕೊಂಡು ದಲಿತ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿರುವ ಕಲ್ಲೋಳಿಯ ದಲಿತ ಬಾಂಧವರ ಕಾರ್ಯ ಶ್ಲಾಘನೀಯವೆಂದು ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಪ್ರಶಂಸಿಸಿದರು.
ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಗುರುವಾರ ರಾತ್ರಿ ಜರುಗಿದ ಸದ್ಗುರು ಸತ್ಯಾನಂದ ಮಹಾಸ್ವಾಮಿಗಳ 20ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಲ್ಲಿನ ದಲಿತ ಬಾಂಧವರು ಧಾರ್ಮಿಕ, ಶೈಕ್ಷಣಿಕ ವಾತಾವರಣವನ್ನು ನಿರ್ಮಿಸುವ ಮೂಲಕ ತಾಲೂಕಿಗೆ ಮಾದರಿಯಾಗಿದ್ದಾರೆ. ವ್ಯವಸ್ಥಿತ ಸಂಘಟನೆಯಿಂದ ಜನರ ಮನ್ನಣೆ ಗಳಿಸಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವತ್ತ ಹೆಜ್ಜೆ ಹಾಕುತ್ತಿರುವ ಇವರ ಶೈಕ್ಷಣಿಕ ಕಾಳಜಿಯನ್ನು ಮೆಚ್ಚುವಂತದ್ದು ಎಂದು ಶ್ಲಾಘಿಸಿದರು.
ಕಲ್ಲೋಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬರುತ್ತಿದೆ. ಈ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಮುಖಂಡರು ಒಂದಾಗಿ ಕೆಲಸ ಮಾಡುವಂತೆ ಕೋರಿದರು. ಕಲ್ಲೋಳಿ ಪಟ್ಟಣಕ್ಕೆ ನಗರೋತ್ಥಾನ ಯೋಜನೆಯಡಿ 5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಟೆಂಡರ್ ಅಂತಿಮ ಹಂತದಲ್ಲಿದೆ. ಫೆಬ್ರುವರಿ ತಿಂಗಳಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ರೈತಾಪಿ ವರ್ಗ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ನದಿ ಹಾಗೂ ಕಾಲುವೆಗಳಿಗೆ ನೀರನ್ನು ಹರಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹುಣಶ್ಯಾಳ ಪಿಜಿಯ ನಿಜಗುಣ ದೇವರು ಮಾತನಾಡಿ, ಬಾಲಚಂದ್ರ ಜಾರಕಿಹೊಳಿ ಅವರು ಧಾರ್ಮಿಕ ಕಾರ್ಯಗಳಿಗೆ ತಮ್ಮನ್ನು ತಾವು ಮುಡುಪಾಗಿಟ್ಟಿದ್ದಾರೆ. ಮಠ, ಮಂದಿರ, ಮಸೀದಿ, ಚರ್ಚಗಳಿಗೆ ಹಣಕಾಸಿನ ನೆರವು ಕಲ್ಪಿಸಿಕೊಡುವ ಮೂಲಕ ಕೊಡುಗೈ ದಾನಿ ಎನಿಸಿಕೊಂಡಿದ್ದಾರೆ. ಬಡವರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸುತ್ತ ಕರುಣಾಮಯಿ ಹಾಗೂ ಹೃದಯವಂತ ವ್ಯಕ್ತಿಯಾಗಿದ್ದಾರೆ. ಇಂತಹ ಕಾಮಧೇನು-ಕಲ್ಪವೃಕ್ಷ ಶಾಸಕರು ಕರ್ನಾಟಕಕ್ಕೆ ಮಾದರಿ ಎನಿಸಿಕೊಂಡಿದ್ದಾರೆ. ಇಂತಹವರನ್ನು ನಾವೆಲ್ಲ ಪಡೆದಿರುವುದು ನಮ್ಮ ಪೂರ್ವಜನ್ಮದ ಪುಣ್ಯವೆಂದು ಬಾಲಚಂದ್ರ ಜಾರಕಿಹೊಳಿ ಅವರ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಶಂಸಿಸಿದರು.
ಸಾನಿಧ್ಯವನ್ನು ಕಂಕಣವಾಡಿಯ ಮಾರುತಿ ಶರಣರು ವಹಿಸಿದ್ದರು.
ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ವಹಿಸಿದ್ದರು.
ಯುವ ಧುರೀಣರಾದ ರಾವಸಾಬ ಬೆಳಕೂಡ, ಸುಭಾಸ ಕುರಬೇಟ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಲ್ಲಪ್ಪ ಹೆಬ್ಬಾಳ, ತಾಪಂ ಮಾಜಿ ಸದಸ್ಯ ಅಶೋಕ ಮಕ್ಕಳಗೇರಿ, ಗುತ್ತಿಗೆದಾರ ಬಿ.ಬಿ. ದಾಸನವರ, ಬಸವರಾಜ ಯಾದಗೂಡ, ಭಗವಂತ ಪತ್ತಾರ, ಬಸವರಾಜ ಸೊಂಟನವರ, ಬಸವರಾಜ ಮರಗನ್ನವರ, ಮುತ್ತೆಪ್ಪ ತೆಳಗಡೆ, ಮಾರುತಿ ಸೊಂಟನವರ, ಬಸವರಾಜ ಭಜಂತ್ರಿ, ಯಮನಪ್ಪ ಸೊಂಟನವರ, ಮಹಾದೇವ ಗೋಕಾವಿ, ಪಪಂ ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು.

Related posts: