RNI NO. KARKAN/2006/27779|Sunday, June 15, 2025
You are here: Home » breaking news » ಬೆಳಗಾವಿ: ಚುನಾವಣೆ ಎದುರಿಸಲು ಸಿದ್ಧರಾಗಿ : ಕಾರ್ಯಕರ್ತರಿಗೆ ಎಐಸಿಸಿ ಕಾರ್ಯದರ್ಶಿ ಮಾಣಿಕ್ ಟ್ಯಾಗೋರ್ ಪಾಠ

ಬೆಳಗಾವಿ: ಚುನಾವಣೆ ಎದುರಿಸಲು ಸಿದ್ಧರಾಗಿ : ಕಾರ್ಯಕರ್ತರಿಗೆ ಎಐಸಿಸಿ ಕಾರ್ಯದರ್ಶಿ ಮಾಣಿಕ್ ಟ್ಯಾಗೋರ್ ಪಾಠ 

ಚುನಾವಣೆ ಎದುರಿಸಲು ಸಿದ್ಧರಾಗಿ : ಕಾರ್ಯಕರ್ತರಿಗೆ ಎಐಸಿಸಿ ಕಾರ್ಯದರ್ಶಿ ಮಾಣಿಕ್ ಟ್ಯಾಗೋರ್ ಪಾಠ

ಬೆಳಗಾವಿ ಮೇ 19: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭೆ
ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಲಿಷ್ಠವಾಗಬೇಕು. ಅದಕ್ಕಾಗಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಒಗ್ಗಟ್ಟನಿಂದ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕೆಂದು ಬೆಳಗಾವಿ ವಿಭಾಗದ ಉಸ್ತುವಾರಿ ಹಾಗೂ ಎಐಸಿಸಿ ಕಾರ್ಯದರ್ಶಿ ಮಾಣಿಕ್ ಟಾಗ್ಯೋರ್ ಕರೆ ನೀಡಿದ್ದಾರೆ.

ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿದ ಅವರು ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗಾವಿ ಜಿಲ್ಲೆಯ ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು
ಹಾಗೂ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬೆಳಗಾವಿ ಜಿಲ್ಲೆ ಅತಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆ ಕಾಂಗ್ರೆಸ್ ನ
ಭದ್ರಕೋಟೆಯಾಗಬೇಕು. ನಾಯಕರು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ
ಬಲ ಸಂವರ್ಧನೆಗೆ ಬೇರು ಮಟ್ಟದಲ್ಲಿ ಸಂಘಟಿಸಬೇಕು ಎಂದು ಮಾಣಿಕ್ ಟಾಗ್ಯೋರ್ ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವ
ಸತೀಶ ಜಾರಕಿಹೊಳಿ, ಶಾಸಕ ಫಿರೋಜ್ ಸೇಠ್, ಸಚೇತಕ ಅಶೋಕ ಪಟ್ಟಣ, ಗಣೇಶ ಹುಕ್ಕೇರಿ,
ವಿವೇಕರಾವ್ ಪಾಟೀಲ, ಕೆಪಿಸಿಸಿ ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್,
ವಿನಯ ನಾವಲಗಟ್ಟಿ, ರಾಜು ಸೇಠ್ ಸೇರಿದಂತೆ ಹಲವಾರು ನಾಯಕರು ಮತ್ತು ಟಿಕೇಟ್
ಆಕಾಂಕ್ಷಿಗಳು ಮಾಣಿಕ್ ಟಾಗ್ಯೋರ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಚರ್ಚಿಸಿದ್ದಾರೆ.

Related posts: