ಘಟಪ್ರಭಾ:ದಿ.19 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಹೋರಾಟ : ಕೆ.ಎಸ್.ಶರ್ಮಾ
ದಿ.19 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಹೋರಾಟ : ಕೆ.ಎಸ್.ಶರ್ಮಾ
ಘಟಪ್ರಭಾ ಫೆ 13: ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲ ಹುಬ್ಬಳ್ಳಿ ಇದರ ಅಧ್ಯಕ್ಷರಾದ ಕೆ.ಎಸ್.ಶರ್ಮಾ ಅವರ ನೇತೃತ್ವದಲ್ಲಿ ಗುತ್ತಿಗೆ ನೌಕರರು, ದಿನಗೂಲಿ ನೌಕರರು ಹಾಗೂ ಕಾಯಂಗೊಂಡ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಧಿವೇಶನ ಸಮಯದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಲು ದಿ.19 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಅನಿರ್ಧಿಷ್ಟ ಅವಧಿಯ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಗುತ್ತಿಗೆ ನೌಕರರು, ದಿನಗೂಲಿ ನೌಕರರು ಹಾಗೂ ಕಾಯಂಗೊಂಡ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಮಹಾಮಂಡಲದ ಗೋಕಾಕ ತಾಲೂಕಾಧ್ಯಕ್ಷ ಆಯ್.ಎಂ.ಸನದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.