ಗೋಕಾಕ:ಸಿದ್ಧರಾಮಯ್ಯ ನೇತೃತ್ವದ ಸರಕಾರ ದೇಶದಲ್ಲಿಯೇ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ : ಸಚಿವ ರಮೇಶ
ಸಿದ್ಧರಾಮಯ್ಯ ನೇತೃತ್ವದ ಸರಕಾರ ದೇಶದಲ್ಲಿಯೇ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ : ಸಚಿವ ರಮೇಶ
ಗೋಕಾಕ ಮಾ, 11 ;- ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ ಸರಕಾರ ಹಲವಾರು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ದೇಶದಲ್ಲಿಯೇ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು ರವಿವಾರದಂದು ಗೋಕಾಕ ವಿಧಾನಸಭಾ ಕ್ಷೇತ್ರದ ಮಾಣಿಕವಾಡಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ರಾಜ್ಯ ಸರಕಾರ ಬಡವರು, ಹಿಂದುಳಿವದರು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಇವು ದೇಶದಲ್ಲಿಯೇ ಮಾದರಿಯಾಗಿವೆ. ಕೋಮುವಾದಿ ಹಾಗೂ ರಾಜ್ಯದಲ್ಲಿ ಅಶಾಂತಿವನ್ನುಂಟು ಮಾಡಲು ಯತ್ನಿಸುತ್ತಿರುವ ಶಕ್ತಿಗಳಿಗೆ ಅವಕಾಶ ನೀಡದೆ ಎಲ್ಲ ಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತಿರುವ ಕಾಂಗ್ರೆಸ ಪಕ್ಷವನ್ನು ಬೆಂಬಲಿಸಬೇಕು. ಯುವಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು ಸುಳ್ಳು ಭರವಸೆಗಳಿಗೆ ಮಾರು ಹೋಗದೆ ಶಾಂತಿಪ್ರಿಯ ನಾಡಿನಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡು ನಾಡಿನ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಚಿವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಟಿ.ಆರ್.ಕಾಗಲ್ ಹಾಗೂ ಮಡ್ಡೆಪ್ಪ ತೋಳಿನವರ, ಮುಖಂಡರಾದ ಪ್ರಕಾಶ ಕರನಿಂಗ, ವಿನೋದ ಕರನಿಂಗ, ಎನ್.ಎಮ್.ಭೋಜಗರ, ಅಣ್ಣಪ್ಪ ಪಾಟೀಲ, ಬಸವಣ್ಣಿ ಬೆನವಾಡಿ ಸೇರಿದಂತೆ ಅನೇಕರು ಇದ್ದರು.