ಗೋಕಾಕ:ಸಾಲಮನ್ನಾ ಮಾಡುವಂತೆ ಆಗ್ರಹಿಸಿ ದಿ.28 ರಂದು ಬಿಜೆಪಿಯಿಂದ ಗೋಕಾಕ ಬಂದ್

ಸಾಲಮನ್ನಾ ಮಾಡುವಂತೆ ಆಗ್ರಹಿಸಿ ದಿ.28 ರಂದು ಬಿಜೆಪಿಯಿಂದ ಗೋಕಾಕ ಬಂದ್
ಗೋಕಾಕ ಮೇ 26 : ಕರ್ನಾಟಕದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಕೊಟ್ಟ ಮಾತಿನಂತೆ ರೈತರ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕಗಳ ಸಂಪೂರ್ಣ ಸಾಲಮನ್ನಾ ಮಾಡಲು ಒತ್ತಾಯಿಸಿ ಬಿಜೆಪಿ ರಾಜಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ದಿ. 28 ರಂದು ಕರ್ನಾಟಕ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಘಟಕದಿಂದ ಸಂಪೂರ್ಣ ಗೋಕಾಕ ಬಂದ ಕರೆ ನೀಡಲಾಗಿದೆ ಎಂದು ಬಿಜೆಪಿ ಉಭಯ ಘಟಕ ಅಧ್ಯಕ್ಷರುಗಳಾದ ಶಶಿಧರ ದೇಮಶೆಟ್ಟಿ ಹಾಗೂ ವಿರುಪಾಕ್ಷಿ ಯಲಿಗಾರ ಜಂಟಿಯಾಗಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ ಅವರು, ಮುಖ್ಯಮಂತ್ರಿ ಎಚ್ಡಿಕೆ ಅವರು ರೈತರ ಸಂಪೂರ್ಣ ಸಾಲಮನ್ನಾ ಮಾಡವಂತೆ ಒತ್ತಾಯಿಸಲು ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಆಗ್ರಹಿಸಲಾಗುವದು.
ದಿ 28 ಮುಂಜಾನೆ 11 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಅಪ್ಸರಾ ಕೂಟ, ಶೆಟ್ಟಿ ಕೂಟ, ಭಾಪನಾ ಕೂಟ, ಮುಖಾಂತರ ಹಾಯ್ದು ಬಸ್ ನಿಲ್ದಾಣ ಮಾರ್ಗವಾಗಿ ತೆರಳಿ ಬಸವೇಶ್ವರ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಿ, ನಂತರ ತಹಶೀಲದಾರÀ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗುವುದು.
ಈ ಬಂದ್ ಹಾಗೂ ಪತ್ರಿಭಟನಾ ಮೆರವಣಿಗೆಯಲ್ಲಿ ತಾಲೂಕಿನ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ಸಾಹಿತಿಗಳು, ಯುವ ಸಂಘಟನೆಗಳು, ಸ್ಥಳೀಯ ಸಂಘಗಳ ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.