ಗೋಕಾಕ :ಬ್ರಾಹ್ಮಣ ಸಮಾಜ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಬ್ರಾಹ್ಮಣ ಸಮಾಜ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ
ಗೋಕಾಕ ಜೂ 13 : ಬೆಳಗಾವಿ ಜಿಲ್ಲೆಯ ಗೋಕಾಕ, ಸವದತ್ತಿ, ಹಾಗೂ ರಾಮದುರ್ಗ ತಾಲೂಕಿನಲ್ಲಿಯ ಕನ್ನಡ ಮಾಧ್ಯಮದಲ್ಲಿ 3ನೇ ತರಗತಿಯಿಂದ ದ್ವೀತಿಯ ವರ್ಷದ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದಿರುವ ಶೇ. 60 ರಷ್ಟು ಅಂಕ ಪಡೆದಿರುವ ಪ್ರತಿಭಾನ್ವಿತ ಬ್ರಾಹ್ಮಣ ಸಮಾಜ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಬೆಂಗಳೂರಿನ ಕೀರ್ತಿ ಸಂಗೋರಾಮ ಪೌಂಡೇಷನ್ ಟ್ರಸ್ಟ್ ವತಿಯಿಂಂದ ಶೈಕ್ಷಣಿಕ ಧನ ಸಹಾಯಕ್ಕಾಗಿ ಹಾಗೂ 60 ವರ್ಷ ಪೂರೈಸಿರುವ ಗಂಡು ಮಕ್ಕಳಿರದ ವಿಧುವೆಯರಿಗಾಗಿ ಮಾಸಾಶನ ನೀಡುವುದಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸುವವರು ಜುಲೈ 15 ರೊಳಗಾಗಿ ಗೋಕಾಕ ನಗರದ ಕಿಲ್ಲಾದ ಗಣಪತಿ ದೇವಸ್ಥಾನದ ಹತ್ತಿರವಿರುವ ಶ್ರೀಕಾಂತ. ಎಲ್. ಪಾಟೀಲ ಇವರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9986690059, 9113568560 ಸಂಪರ್ಕಿಸಬೇಕೆಂದು ಪ್ರಕಟನೆಯಲ್ಲಿ ಕೋರಲಾಗಿದೆ.