RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಮಹಾತ್ಮರ ಜೀವನ ಚರಿತ್ರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಿ : ಎನ್.ಮುನಿರಾಜ

ಗೋಕಾಕ:ಮಹಾತ್ಮರ ಜೀವನ ಚರಿತ್ರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಿ : ಎನ್.ಮುನಿರಾಜ 

ನಗರದ ತಾಪಂ ಸಭಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಅಯೋಜಿಸಿದ್ದ ನಾಡುಪ್ರಭು ಕೆಂಪೆಗೌಡರ ಜಯಂತಿ ಹಾಗೂ ಬೆಳಗಾವಿ ಜಿಲ್ಲೆಯ ಎಲ್ಲಾ ಮಟ್ಟದ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿರುವುದು.

ಮಹಾತ್ಮರ ಜೀವನ ಚರಿತ್ರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಿ : ಎನ್.ಮುನಿರಾಜ

ಗೋಕಾಕ ಜೂ 27 : ನಾಡು ಕಂಡ ಮಹಾತ್ಮರ ಇತಿಹಾಸವನ್ನು ಅರಿತು ಅವುಗಳನ್ನು ಜೀವನದಲ್ಲಿ ಆಚರಣೆ ತರುವಂತೆ ಬೆಳಗಾವಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಮುನಿರಾಜ ಹೇಳಿದರು.
ಬುಧವಾರದಂದು ನಗರದ ತಾಪಂ ಸಭಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಅಯೋಜಿಸಿದ್ದ ನಾಡುಪ್ರಭು ಕೆಂಪೆಗೌಡರ ಜಯಂತಿ ಹಾಗೂ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಿನ ಮುರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಡಾ|| ಬಿ.ಆರ್.ಅಂಬೇಡ್ಕರ, ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳ ಪ್ರಾಶುಪಾಲರ ಮತ್ತು ವಾರ್ಡನ್ನರ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕೆಂಪೆಗೌಡರು ಕಟ್ಟಿದ ಬೆಂಗಳೂರು ಇಂದು ಬೃಹತ್ ಪ್ರಮಾಣದಲ್ಲಿ ಬೆಳೆದು ನಾಡಿನ ರಾಜಧಾನಿಯಾಗಿದೆ. ಅಪ್ಪಟ್ಟ ಕನ್ನಡಿಗರಾಗಿದ್ದ ಅವರು, ನಾಡಿಗಾಗಿ ಹೋರಾಟ ಮಾಡಿ ಎಲ್ಲ ಕನ್ನಡಿಗರ ಮನಸ್ಸಿನಲ್ಲಿ ನೆಲೆಸಿದ್ದಾರೆ. ಇಂತಹ ಮಹಾತ್ಮರ ಇತಿಹಾಸಗಳನ್ನು ತಾವು ಅರಿತು ಮಕ್ಕಳಲ್ಲಿ ಅರಿವು ಮೂಡಿಸಿ ಅವರ ಸರ್ವಾಂಗೀಣ ಬೆಳವಣಿಗೆಯಲ್ಲಿ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಶ್ರಮಿಸಿಬೇಕೆಂದು ತಿಳಿಸಿದರು.
ಕನ್ನಡ ಸಾಹಿತ್ಯ ಅತ್ಯಂತ ಶ್ರೀಮಂತವಾಗಿದ್ದು, ಮಹಾನ ಕವಿಗಳ ಸಾಹಿತ್ಯ ಕುರಿತು ಮಕ್ಕಳಲ್ಲಿ ಆಸಕ್ತಿಯನ್ನು ಮೂಡಿಸಿ, ಅವರಲ್ಲಿ ಕನ್ನಡಾಭಿಮಾನವನ್ನು ಬೆಳೆಸಿ, ನಿರಂತರ ಅಧ್ಯಯನದಿಂದ ಜ್ಞಾನ ಮಟ್ಟ ಹೆಚ್ಚುತ್ತದೆ. ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಆಚರಣೆಗೆ ತರುವುದರೊಂದಿಗೆ ವಿದ್ಯಾರ್ಥಿಗಳನ್ನು ಸಾಧಕರನ್ನಾಗಿ ತಮ್ಮನ್ನು ತೊಡಗಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನವರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ವಿ.ಕಲ್ಲಪ್ಪನವರ, ಎ.ವಸಂತ, ಎಲ್ಲ ತಾಲೂಕುಗಳ ಸಹಾಯಕ ನಿರ್ದೇಶಕರು, ಪ್ರಾಶುಪಾಲರು, ವಾರ್ಡನ್ನರು ಇದ್ದರು. ಎಸ್.ಎಸ್.ಶೀಗಿಹೊಳಿ ಸ್ವಾಗತಿಸಿ ವಂದಿಸಿದರು.

Related posts: