ಗೋಕಾಕ:ಅಗಸ್ಟ್ ತಿಂಗಳಲ್ಲಿ ಆಹಾರ ಮೇಳ ಹಾಗೂ ಪ್ರದರ್ಶನ ಮತ್ತು ಮಾರಾಟ ಮೇಳ : ಮಹಾಬಳೇಶ್ವರ
ಅಗಸ್ಟ್ ತಿಂಗಳಲ್ಲಿ ಆಹಾರ ಮೇಳ ಹಾಗೂ ಪ್ರದರ್ಶನ ಮತ್ತು ಮಾರಾಟ ಮೇಳ : ಮಹಾಬಳೇಶ್ವರ
ಗೋಕಾಕ ಜು 21 : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ ಸಿರಿಧ್ಯಾನ್ಯಗಳ ಆಹಾರ ಮೇಳ ಹಾಗೂ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಅಗಸ್ಟ್ 25 ಮತ್ತು 26 ರಂದು ನಗರದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಪ್ರಚಾರ ಪತ್ರಗಳನ್ನು ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಕಾರ್ಯಲಯದಲ್ಲಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಯೋಜನಾಧಿಕಾರಿ ಮಹಾಬಳೇಶ್ವರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯದಾಂತ್ಯ ಇಂತಹ 20 ಮೇಳಗಳನ್ನು ನಡೆಸಲಾಗಿದ್ದು, ಗೋಕಾಕ ನಗರದಲ್ಲಿ ಇದು 21ನೇ ಮೇಳವಾಗಿದೆ. ಈ ಮೇಳದಲ್ಲಿ ನಮ್ಮ ದೇಹಕ್ಕೆ ಬೇಕಾಗುವ ನಾರು, ಕಬ್ಬಿಣ, ಸುಣ್ಣ, ಪೀಷ್ಠ ಇತ್ಯಾದಿಗಳು ಹೇರಳವಾಗಿರುವ ಸಾವೆ, ಊದಲು, ಹಾರಕ, ಕೊರಲೆ, ಸಜ್ಜೆ, ಜೋಳ, ಬರಗು, ರಾಗಿಯಂತಹ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಗುವದು. ಸಿರಿಧಾನ್ಯಗಳ ತಿಂಡಿ-ತಿನಿಸುಗಳು ಮತ್ತು ಸಾವಯವ ಮಳಿಗೆಗಳು ಹಾಗೂ ಸಿರಿಧಾನ್ಯಗಳ ಆಹಾರ ತಯಾರಿಕೆ ಪ್ರಾತ್ಯಕ್ಷಿಕೆ ಇದ್ದು ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 7022412466, 8970481203, 9741477456 ಸಂಪರ್ಕಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ, ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಸೋಮಶೇಖರ ಮಗದುಮ್ಮ ಹಾಗೂ ಸಿಬ್ಬಂದಿಯವರು ಇದ್ದರು.