ನಿಪ್ಪಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ : ಯುವಕ ಸಾವು
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ : ಯುವಕ ಸಾವು
ನಿಪ್ಪಾಣಿ ಜೂ 15: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ
ಹೊಡೆದ ಪರಿಣಾಮ ವ್ಯಕ್ತಿ ಯೋರ್ವನು ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ನಿಪ್ಪಾಣಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ .
ಮೃತನನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಅನಿಕೇತ ಅವಿನಾಶ ಸುಳಾನಕುರೆ(28) ಎಂದು ಗುರುತಿಸಲಾಗಿದೆ. ಕೊಲ್ಲಾಪುರದ ಕಡೆ ಕಾರು ಸಂಚರಿಸುವಾಗ ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ