RNI NO. KARKAN/2006/27779|Monday, June 16, 2025
You are here: Home » breaking news » ಘಟಪ್ರಭಾ :ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಈ ಭಾಗದ ರೈತರ ಜೀವನಾಡಿಯಾಗಿದೆ : ಸಿದ್ಧಲಿಂಗ ಮಹಾಸ್ವಾಮಿಗಳು

ಘಟಪ್ರಭಾ :ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಈ ಭಾಗದ ರೈತರ ಜೀವನಾಡಿಯಾಗಿದೆ : ಸಿದ್ಧಲಿಂಗ ಮಹಾಸ್ವಾಮಿಗಳು 

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಕಾರ್ಖಾನೆಯು ಈ ಭಾಗದ ರೈತರ ಜೀವನಾಡಿಯಾಗಿದೆ : ಸಿದ್ಧಲಿಂಗ ಮಹಾಸ್ವಾಮಿಗಳು

ಘಟಪ್ರಭಾ ಅ 29 : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿನ ಪ್ರಾರಂಭೋತ್ಸವಕ್ಕೆ ಅರಭಾವಿ ದುರದುಂಡೇಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಸೋಮವಾರದಂದು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಅರಭಾವಿ ದುರದುಂಡೇಶ್ವರರ ಆಶೀರ್ವಾದದಿಂದ ಆರಂಭಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಈ ಭಾಗದ ರೈತರ ಜೀವನಾಡಿಯಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ಮಾರ್ಗದರ್ಶನದಲ್ಲಿ ಕಾರ್ಖಾನೆಯು ಪ್ರಗತಿಯತ್ತ ಸಾಗುತ್ತಿದೆ. ರೈತರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಪ್ರಶಂಸನೀಯವಾದದ್ದು ಎಂದು ಶ್ರೀಗಳು ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಖಾನೆಯ ಅಧ್ಯಕ್ಷ ಅಶೋಕ ಪಾಟೀಲ, ನಿರ್ದೇಶಕರಾದ ಬಸಗೌಡ ಪಾಟೀಲ, ಕೃಷ್ಣಪ್ಪ ಬಂಡ್ರೊಳ್ಳಿ, ಶಿವಲಿಂಗ ಪೂಜೇರಿ, ಮಾಳಪ್ಪ ಜಾಗನೂರ, ಭೂತಪ್ಪ ಗೋಡೇರ, ಮಹಾದೇವಪ್ಪ ಭೋವಿ, ಮಲ್ಲಿಕಾರ್ಜುನ ಕಬ್ಬೂರ, ಗಿರೀಶ ಹಳ್ಳೂರ, ಯಲ್ಲವ್ವ ಸಾರಾಪೂರ, ಲಕ್ಕವ್ವ ಬೆಳಗಲಿ, ಕಾರ್ಖಾನೆಯ ಸಲಹಾ ಸಮೀತಿಯ ವಿಕ್ರಮ ಅಂಗಡಿ, ಸೈದಪ್ಪ ಗದಾಡಿ, ಬಸವರಾಜ ಕಲ್ಯಾಣಶೆಟ್ಟಿ, ಸಿಡಿಓ ಜೆ.ಆರ್. ಬಬಲೇಶ್ವರ, ಮುಂತಾದವರು ಉಪಸ್ಥಿತರಿದ್ದರು.

ರೈತರೇ ಕಾರ್ಖಾನೆಯ ಬೆನ್ನೆಲಬು : ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಯಲ್ಲಿ ರೈತರ ಸಹಕಾರ ಅಗತ್ಯವಾಗಿದೆ. ಪ್ರತಿವರ್ಷ ರೈತರು ನಮ್ಮ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡುತ್ತ ಕಾರ್ಖಾನೆಯ ಶ್ರೇಯೋಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿಯೂ ನಮ್ಮ ಕಾರ್ಖಾನೆಗೆ ಗುಣಮಟ್ಟದ ಕಬ್ಬು ಪೂರೈಕೆ ಮಾಡಬೇಕು. ಈ ಬಾರಿಯೂ ರೈತರಿಗೆ ಪ್ರತಿ ಟನ್ ಕಬ್ಬಿಗೆ ಯೋಗ್ಯ ದರ ನೀಡುತ್ತೇವೆ. ಕಳೆದ ಹಂಗಾಮಿನಲ್ಲಿ ಜಿಲ್ಲೆಯಲ್ಲಿಯೇ ರೈತರಿಗೆ ಗರಿಷ್ಠ ಬೆಲೆ ನೀಡಿರುವ ಹೆಗ್ಗಳಿಕೆ ನಮ್ಮ ಕಾರ್ಖಾನೆಯದ್ದು. ಕಾರ್ಖಾನೆಯನ್ನು ಉಳಿಸಿ ಬೆಳೆಸಿ ಪೋಷಿಸಲು ರೈತರ ಪ್ರೋತ್ಸಾಹ ಅತ್ಯಗತ್ಯ.

Related posts: