RNI NO. KARKAN/2006/27779|Monday, June 16, 2025
You are here: Home » breaking news » ಬೆಳಗಾವಿ:ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ : ಸಚಿವ ಡಿ.ಕೆ.ಶಿವಕುಮಾರ

ಬೆಳಗಾವಿ:ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ : ಸಚಿವ ಡಿ.ಕೆ.ಶಿವಕುಮಾರ 

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ : ಸಚಿವ ಡಿ.ಕೆ.ಶಿವಕುಮಾರ

ಬೆಳಗಾವಿ ಡಿ 10 : ಬೆಳಗಾವಿಯಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೋಳಲು ಬೆಳಗಾವಿಯ ಸಾಂಬ್ರಾ ನಿಲ್ದಾಣದಲ್ಲಿ ಬಂದಿಳಿದು ಸುರ್ವಣಸೌಧ ಕಡೆ ಪ್ರಾಯಾಣ ಬೆಳೆಸಿದ್ದ ವೇಳೆ ಮಾತನಾಡಿದ ಡಿ ಕೆ ಶಿವಕುಮಾರ್​, ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಇತ್ಯರ್ಥಕ್ಕೆ ಆದ್ಯತೆ ನೀಡುವಂತೆ ತಮ್ಮ ಎಲ್ಲ ಶಾಸಕರು ಸರ್ಕಾರದ ಗಮನ ಸೆಳಿತಾರೆ. ರಾಜಕಾರಣ ಬಿಟ್ಟು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿ. ಸರ್ಕಾರ ಕೆಡವಲು ಬೇರೆ ಯಾರೂ ಬೇಕಿಲ್ಲ. ಡಿಕೆಶಿ, ಸಿದ್ದರಾಮಯ್ಯ ಮಾತ್ರ ಸಾಕು ಎಂಬ ಯಡಿಯೂರಪ್ಪ ಹೇಳಿಕೆ ವಿಚಾರ ಕುರಿತು ಹೇಳಿಕೆ ಪರಿಶೀಲನೆ ಬಳಿಕ ಪ್ರತಿಕ್ರಿಯಿಸುವೆ ಎಂದರು.

ಚೆನ್ನೈಗೆ ಹೋಗಿ ಸಿದ್ದಗಂಗಾ ಶ್ರೀಗಳನ್ನು ಮಾತಾಡಿಸಿಕೊಂಡು ಬಂದಿರುವೆ. ಅವರು ತುಂಬಾ ಲವಲವಿಕೆಯಿಂದ ಇದ್ದಾರೆ ಎಂದು ಡಿಕೆ ಶಿವಕುಮಾರ್​ ತಿಳಿಸಿದ್ರು. ಸಿಎಂ ಕುಮಾರಸ್ವಾಮಿ ಶೋಕಿಗಾಗಿ ಭತ್ತ ಕೊಯ್ಲು ಮಾಡಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,
 ಹಾಗಿದ್ರೆ ಯಡಿಯೂರಪ್ಪ ಹಸಿರು ಶಾಲು ಹಾಕ್ಕೊಂಡು ಪ್ರಮಾಣವಚನ ಸ್ವೀಕಾರ ಮಾಡಿದ್ದರಲ್ಲಾ ಅವರು ಯಾವಾಗ ಉಳುಮೆ ಮಾಡಿದ್ದು? ಎಂದು ಟಾಂಗ್​ ನೀಡಿದ್ರು. 

ಇದೇ ವೇಳೆ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ, ಬಿಜೆಪಿಯವರ ತಟ್ಟೆಯಲ್ಲಿ ಕತ್ತೆ ಬಿದ್ದಿದ್ದು, ನಮ್ಮ ತಟ್ಟೆಯಲ್ಲಿ ನೊಣ ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದರೆ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ, ರಾಜ್ಯದಲ್ಲಿ ಅದ್ಯಾವ ಮುಖ ಇಟ್ಟುಕೊಂಡು ಬಿಜೆಪಿ ಪ್ರತಿಭಟನೆ ಮಾಡುತ್ತೆ? ಬಿಜೆಪಿಯವರಿಗೆ ಅಧಿಕಾರ ಬೇಕಾಗಿದ್ದರಿಂದ ಹೋರಾಟದ ಶೋ ಅಪ್ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ರೈತರ ನೆರವಿಗೆ ಬರಲಿ ಎಂದು ಸವಾಲು ಹಾಕಿದ್ರು. 

Related posts: