ಅಥಣಿ:ಜಿಲ್ಲಾ ಕಾಂಗ್ರೆಸಿನ ಸ್ಟೇರಿಂಗ್ ನನ್ನ ಕೈಯಲ್ಲಿ ಇಲ್ಲಾ : ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ಸತೀಶ
ಜಿಲ್ಲಾ ಕಾಂಗ್ರೆಸಿನ ಸ್ಟೇರಿಂಗ್ ನನ್ನ ಕೈಯಲ್ಲಿ ಇಲ್ಲಾ :ಅಥಣಿ ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ಸತೀಶ
ಅಥಣಿ ಜೂ 30: ಬೆಳಗಾವಿ ಜಿಲ್ಲಾ ಕಾಂಗ್ರೇಸ ನ ಸ್ಟೇರಿಂಗ್ ನನ್ನ ಕೈಯಲ್ಲಿ ಇಲ್ಲಾ ನಾನು ಹಿಂದಿನ ಸೀಟಿನಲ್ಲಿ ಕುಳಿತಿದ್ದೇನೆ ಅಷ್ಟೇ ಎಂದು ನೂತನ ಎಐಸಿಸಿ ಕಾರ್ಯದರ್ಶಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು
ಅವರು ಬೆಳಗಾವಿ ಜಿಲ್ಲಾ ಕಾಂಗ್ರೇಸ ಸಮಿತಿ ಅಥಣಿಯಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು
ಜಿಲ್ಲೆಯಲ್ಲಿ ಪಕ್ಷದ ಮುಂದಾಳತ್ವವನ್ನು ವಹಿಸಿರುವ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಜಿಲ್ಲೆಯ ಎಲ್ಲ ಕಾರ್ಯಕರ್ತರನ್ನು ಒಗ್ಗೂಡಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದರೆ ನಾನು ಎಲ್ಲ ರೀತಿಯ ಸಹಾಯ ಸಹಕಾರ ನೀಡಲು ಸಿದ್ದ
ಕಳೆದ ಚುನಾವಣೆಯಲ್ಲಿಯೂ ಸಹ ನಾನು ಜಿಲ್ಲೆ ಅಷ್ಟೇಅಲ್ಲಾ ರಾಜಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಹಕರಿಸಿದ್ದೆನೆ ಬರುವ ಚುನಾವಣೆಯಲ್ಲಿ ಸಹ ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ
ಜಿಲ್ಲೆಯಲ್ಲಿ ಯಾರಿಗೆ ಟಿಕೆಟ್ ನೀಡಿದರು ಅವರ ಗೆಲುವಿಗೆ ಶ್ರಮಿಸುತ್ತೆವೆ ಎಂದ ಸತೀಶ ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಿ ಟಿಕೆಟ್ ನಿಡಲು ಮನವಿ ಮಾಡಿದರು .
ಕಾಂಗ್ರೇಸ್ ಪಕ್ಷ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಪ್ರಚಾರದ ಕೋರತೆ ಎದುರಿಸುತ್ತೀದೆ ಕಾರ್ಯಕತರು ಮುಂದೆ ಬಂದು ಪಕ್ಷದ ಕಾರ್ಯಗಳ ಬಗ್ಗೆ ಪ್ರಚಾರ ಮಾಡಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಬೇಕು ಆ ನೀಟ್ಟಿನಲ್ಲಿ ಎಲ್ಲರೂ ಶ್ರಮಿಸಿ ಬರುವ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕನಿಷ್ಟ15 ಕ್ಷೇತ್ರಗಳಲ್ಲಿ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸತೀಶ ಹೇಳಿದರು
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ,ಎಐಸಿಸಿ ಉಸ್ತುವಾರಿ ವೇಣುಗೋಪಾಲ , ಪಕ್ಷದ ಸಚಿವರು ,ಸಂಸದರು , ಶಾಸಕರು, ಮಾಜಿ ಶಾಸಕರು ಸೇರಿದಂತೆ ಲಕ್ಷಾಂತರ ಕಾಂಗ್ರೇಸ ಕಾರ್ಯಕರ್ತರು ಉಪಸ್ಥಿತರಿದ್ದರು