ಗೋಕಾಕ:ಜಾರ್ಜ್ ಫರ್ನಾಂಡಿಸ್ ಅವರ ಅಗಲಿಕೆಯಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ : ಪುಂಡಲೀಕಪ್ಪ ಪಾರ್ವತೇರ
ಜಾರ್ಜ್ ಫರ್ನಾಂಡಿಸ್ ಅವರ ಅಗಲಿಕೆಯಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ : ಪುಂಡಲೀಕಪ್ಪ ಪಾರ್ವತೇರ
ಬೆಟಗೇರಿ ಜ 29 :ಕೇಂದ್ರದ ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ಧಿ, ಸಮಾಜವಾದಿ ನಾಯಕ ಜಾರ್ಜ್ ಫರ್ನಾಂಡಿಸ್ ಅವರ ಅಗಲಿಕೆಯಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ಭಜನಾ ಮಂಡಳಿ ಪ್ರಧಾನ ಸಂಚಾಲಕ, ಸಮಾಜವಾದಿ ನಾಯಕ ಜಾರ್ಜ್ ಫರ್ನಾಂಡಿಸ್ ಅವರ ಅಭಿಮಾನಿ ಪುಂಡಲೀಕಪ್ಪ ಪಾರ್ವತೇರ ತೀವ್ರ ಸಂತಾಪ ಸೂಚಿಸಿದ್ದಾರೆ.
ಕನ್ನಡ ನಾಡಿನವರಾದ ಜಾರ್ಜ್ ಫರ್ನಾಂಡಿಸ್ ಅವರು ಕಾರ್ಮಿಕರ ಸಮಗ್ರ ಏಳಿಗೆಗೆ ಶ್ರಮಿಸಿ, ಕಾರ್ಮಿಕರ ಆಶಾಕಿರಣವಾಗಿದ್ದರು. ಈ ಹಿಂದಿನ ಪ್ರಧಾನಿಯಾಗಿದ್ದ ವಿ.ಪಿ.ಸಿಂಗ್ ಅವರ ಸಚಿವ ಸಂಪುಟದಲ್ಲಿ ರೈಲ್ವೆ ಸಚಿವರಾಗಿ, ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಅಚ್ಚುಕಟ್ಟಾಗಿ ಜನರ ಮೆಚ್ಚುಗೆಗೆ ಪಾತ್ರರಾಗುವಂತೆ ಕಾರ್ಯನಿರ್ವಹಿಸಿದ ಫರ್ನಾಂಡಿಸ್ ಅವರ ರಾಜಕೀಯ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿ, ಈ ನಾಡು ಮತ್ತು ದೇಶ ಒಬ್ಬ ಮಹಾನ್ ರಾಜಕೀಯ ಹಿರಿಯ ಸಮಾಜವಾದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಬಿಜೆಪಿ ಯುವ ಮುಖಂಡ, ನ್ಯಾಯವಾದಿ ಎಂ.ಐ.ನೀಲಣ್ಣವರ, ತಾಪಂ ಮಾಜಿ ಸದಸ್ಯ ಬಸವಂತ ಕೋಣಿ, ತಾಪಂ ಹಾಲಿ ಸದಸ್ಯ ಲಕ್ಷ್ಮಣ ನೀಲಣ್ಣವರ, ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಪತ್ರೇಪ್ಪ ನೀಲಣ್ಣವರ, ಮಲ್ಲಪ್ಪ ಪಣದಿ, ಈರಣ್ಣ ಸಿದ್ನಾಳ, ಈಶ್ವರ ಮುಧೋಳ, ಈಶ್ವರ ಬಳಿಗಾರ, ಈರಪ್ಪ ದೇಯಣ್ಣವರ, ಸುಭಾಷ ಕರೆಣ್ಣವರ, ಮಹಾದೇವ ಕಂಬಾರ, ವೀರನಾಯ್ಕ ನಾಯ್ಕರ ಸೇರಿದಂತೆ ಗಣ್ಯರು, ಅಭಿಮಾನಿಗಳು ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.