ಗೋಕಾಕ:ಸೇತುವೆ ನಿರ್ಮಾಣದ ಕಾಮಗಾರಿಯ ಅಡಿಗಲ್ಲು ಸಮಾರಂಭ ನಾಳೆ
ಸೇತುವೆ ನಿರ್ಮಾಣದ ಕಾಮಗಾರಿಯ ಅಡಿಗಲ್ಲು ಸಮಾರಂಭ ನಾಳೆ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ, 7 ;-
ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ನಗರದ ಪಕ್ಕದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣದ ಕಾಮಗಿರಿಗೆ ನಾಳೆ ದಿ. 8 ರಂದು ಮುಂಜಾನೆ 9 ಗಂಟೆಗೆ ಅಡಿಗಲ್ಲು ನೆರವೇರಲಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಸುಮಾರು 17.10 ಕೋಟಿ ರೂ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಲಿದ್ದು ಮಾಚಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಅಡಿಗಲ್ಲು ಸಮಾರಂಭ ನೆರವೇರಿಸುವರು.
ಈ ಸೇತುವೆ ನಿರ್ಮಾಣದಿಂದ ನಗರದ ಹೊರವಲಯದ ಲೋಳಸೂರ ಸೇತುವೆ ಮೇಲಿನ ಸಂಚಾರಿ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.