ಗೋಕಾಕ:ರಂಗೋಲಿ ಬಿಡಿಸುವ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಿದ ಅಂಗನವಾಡಿ ಕಾರ್ಯಕರ್ತೆಯರು
ರಂಗೋಲಿ ಬಿಡಿಸುವ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಿದ ಅಂಗನವಾಡಿ ಕಾರ್ಯಕರ್ತೆಯರು
ನಮ್ಮ ಬೆಳಗಾವಿ ಸುದ್ದಿ, ಗೋಕಾಕ ಮಾ 30:
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಇಲ್ಲಿಯ ಮಿನಿ ವಿಧಾನಸೌಧ ಆವರಣದಲ್ಲಿ ಶನಿವಾರದಂದು ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಕಾರ್ಯಕರ್ತೆಯರು ರಂಗೋಲಿ ಬಿಡಿಸುವ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಎ.ಎಮ್.ಕಾಂಬಳೆ, ಉಪತಹಶೀಲದಾರ ಎಸ್.ಕೆ.ಕುಲಕರ್ಣಿ, ಬಿಸಿಯೂಟ ಯೋಜನಾಧಿಕಾರಿ ಎ.ಬಿ.ಮಾಲಭನ್ನವರ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಇದ್ದರು.